Tue,Apr23,2024
ಕನ್ನಡ / English

ವುಹಾನ್ ಲ್ಯಾಬ್‌ನ ಸಿಬ್ಬಂದಿಗಳ ಅನಾರೋಗ್ಯದ ಕುರಿತು ಗುಪ್ತಚರ ವರದಿ : ಕೋವಿಡ್-19 ಮೂಲದ ಕುರಿತು ಹೆಚ್ಚಿದ ಚರ್ಚೆ | ಜನತಾ ನ್ಯೂಸ್

24 May 2021
1463

ವಾಶಿಂಗ್ಟನ್ : ಚೀನಾದ ವುಹಾನ್ ನಲ್ಲಿ ಮೊದಲು ಬೆಳಕಿಗೆ ಬಂದ ಕೊರೊನಾ ವೈರಸ್ ಜಗತ್ತಾದ್ಯಂತ ಬಹುತೇಕ ರಾಷ್ಟ್ರಗಳ ಆರೋಗ್ಯ ಕ್ಷೇತ್ರದ ಸಾಮರ್ಥ್ಯಗಳಿಗೆದೊಡ್ಡ ಸವಾಲನ್ನು ಎಸೆದಿದ್ದು, ಭಾರತ ಸೇರಿದಂತೆ ವಿಶ್ವದ ಬಲಿಷ್ಠ ರಾಷ್ಟ್ರಗಳೂ ಸಹ ಇಂದಿಗೂ ಸಹ ಈ ವೈರಸ್ ನೊಂದಿಗೆ ಹೋರಾಟ ನಡೆಸುತ್ತಲೇ ಇದೆ. ಈ ಮಧ್ಯೆ, ಕರೋನಾ ವೈರಸ್ ವುಹಾನ್ ನ ಪ್ರಯೋಗಾಲಯದಲ್ಲಿ ತಯಾರಾಗಿರುವದು ಎಂಬುದಕ್ಕೆ ಪೂರಕ ಮಾಹಿತಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಮೂವರು ಸಂಶೋಧಕರು 2019ರ ನವೆಂಬರ್‌ನಲ್ಲಿ ಸಾಕಷ್ಟು ಅನಾರೋಗ್ಯ ಪಿಡಿತರಾಗಿದ್ದರೆಂದರೆ, ಅವರನ್ನು ಆರೈಕೆಗೆ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು, ಎಂಬ ಈ ಹಿಂದೆ ಬಹಿರಂಗಪಡಿಸದ ಅಮೇರಿಕ(ಯುಎಸ್) ಗುಪ್ತಚರ ವರದಿಯ ಪ್ರಕಾರ, ಕೋವಿಡ್-19 ವೈರಸ್ ಪ್ರಯೋಗಾಲಯದಿಂದ ಹೊರಗೆ ತಪ್ಪಿಸಿಕೊಂಡಿರಬಹುದೇ? ಎಂಬ ಬಗ್ಗೆ ಸಂಪೂರ್ಣ ತನಿಖೆಗಾಗಿ ಹೆಚ್ಚುತ್ತಿರುವ ಕೂಗುಗಳ ತೂಕವನ್ನು ಹೆಚ್ಚಿಸುವ ಸಾದ್ಯತೆಗಳಿವೆ, ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ವರದಿಯ ವಿವರಗಳು ಟ್ರಂಪ್ ಆಡಳಿತದ ಅಂತಿಮ ದಿನಗಳಲ್ಲಿ ಹೊರಡಿಸಲಾದ ಸ್ಟೇಟ್ ಡಿಪಾರ್ಟ್ಮೆಂಟ್ ಫ್ಯಾಕ್ಟ್ ಶೀಟ್ ಗಿಂತ ಅಧಿಕವಾಗಿದೆ. ಇದರ ಪ್ರಕಾರ, ಕರೋನವೈರಸ್ ಮತ್ತು ಇತರ ರೋಗಕಾರಕಗಳ ಅಧ್ಯಯನ ಕೇಂದ್ರವಾದ ಲ್ಯಾಬ್‌ನ ಹಲವಾರು ಸಂಶೋಧಕರು 2019ರ ಸಂಕ್ರಾಮಿಕ ಆರಂಭಿಕ ಕಾಲದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು, ಅದರಲ್ಲೂ ಕೋವಿಡ್-19 ಮತ್ತು ಸಾಮಾನ್ಯ ಕಾಲೋಚಿತ ಕಾಯಿಲೆಗೆ ಸಂಬಂಧಿಸಿದ ರೋಗಲಕ್ಷಣಗಳೊಂದಿಗೆ.

ಕೋವಿಡ್-19 ರ ಮೂಲದ ಕುರಿತಾದ ತನಿಖೆಯ ಮುಂದಿನ ಹಂತದ ಬಗ್ಗೆ ಚರ್ಚಿಸುವ ನಿರೀಕ್ಷೆಯಿದ್ದ ಹಾಗೂ ನಿರ್ಧಾರ ತೆಗೆದುಕೊಳ್ಳುವ ವಿಶ್ವ ಆರೋಗ್ಯ ಸಂಸ್ಥೆಯ ಸಂಸ್ಥೆಯ ಸಭೆಯ ಮುನ್ನಾದಿನದಂದು, ವೈರಸ್ ಸಂಶೋಧಕರ ಸಂಖ್ಯೆ ಹಾಗೂ ಅವರ ಕಾಯಿಲೆಗಳ ಕಾಲ ಮತ್ತು ಅವರ ಆಸ್ಪತ್ರೆ ಭೇಟಿಗಳ ಕುರಿತು ವರದಿ ಬಹಿರಂಗಪಡಿಸಲಾಗಿದೆ.

ವೈರಸ್ ಹರಡುವಿಕೆಗೆ ಚೀನಾ ಕಾರಣ ಎಂದು ಅಮೇರಿಕಾ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗವಾಗಿ ಹೇಳಿಕೆ ನೀಡಿದ್ದು ಬಿಟ್ಟರೆ ಇನ್ಯಾವ ದೇಶವೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.

RELATED TOPICS:
English summary :Wuhan Lab sick staff report by intelligence raises debate on Covid-19 origin

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...