ಕೊರೊನಾಗೆ 8 ತಿಂಗಳ ತುಂಬು ಗರ್ಭಿಣಿ ಬಲಿ: ಹೊಟ್ಟೆಯಲ್ಲಿದ್ದ ಮಗುವಿನ ಜೀವ ಉಳಿಸಿದರು ವೈದ್ಯರು | ಜನತಾ ನ್ಯೂಸ್
ಬೆಂಗಳೂರು : ಕೊರೊನಾಗೆ 8 ತಿಂಗಳ ತುಂಬು ಗರ್ಭಿಣಿ ಬಲಿಯಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿ ವೈದ್ಯರು ಮಗವನ್ನು ಹೊರ ತೆಗೆದಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ಮೂಲದ ಅಶ್ವಿನಿ ಎಂಬ 8 ತಿಂಗಳ ತುಂಬು ಗರ್ಭಿಣಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಮೊದಲು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಆಕೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ದೊಡ್ಡಬಳ್ಳಾಪುರದ ಆಸ್ಪತ್ರೆ ದಾಖಲಿಸಲಾಗಿತ್ತು.
ಅಲ್ಲಿಂದ ವೈದ್ಯರ ಸೂಚನೆಯಂತೆ ನಗರದ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಬೌರಿಂಗ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶ್ವಿನಿ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದ್ದರಿಂದ, ವೈದ್ಯರು ಆಪರೇಶನ್ ಮಾಡಿ ಮಗುವನ್ನು ಹೊರತೆಗೆದಿದ್ದರು.
3 ದಿನಗಳ ನಂತರ ಚಿಕಿತ್ಸೆ ಫಲಿಸದೆ ಅಶ್ವಿನಿ ಮೃತಪಟ್ಟಿದ್ದಾಳೆ.. ಸದ್ಯ ವೆಂಟಿಲೇಟರ್ ನಲ್ಲಿ ಹಸುಗೂಸಿಗೆ ಚಿಕಿತ್ಸೆ ಮುಂದುವರಿಸಿದ್ದು, ತಾಯಿಯನ್ನು ಕಳೆದುಕೊಂಡು ಹಸುಗೂಸು ಮಾತ್ರವಲ್ಲದೆ, 3 ವರ್ಷದ ಹೆಣ್ಣು ಮಗು ಸಹ ಅನಾಥವಾಗಿದೆ.