ವೀರಪ್ಪನ್ ಹಾರಿಸಿದ್ದ ಗುಂಡುಗಳನ್ನು ತಲೆಯಲ್ಲಿಟ್ಟುಕೊಂಡೇ ಸೇವಾ ನಿರತರಾಗಿದ್ದ ಪಿಎಸ್ಐ ನಿಧನ! ನಿವೃತ್ತಿಗೆ ಕೇವಲ 5 ದಿನ ಮಾತ್ರ ಬಾಕಿ.. | ಜನತಾ ನ್ಯೂಸ್
ಚಾಮರಾಜನಗರ : ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜನಾಯಕ್ ಇಂದು ಮೃತಪಟ್ಟಿದ್ದಾರೆ.
ಕಳೆದ ವರ್ಷ ಕರೊನಾ ಸಮಯದಲ್ಲಿ 75 ದಿನಗಳ ಕಾಲ ರಜಾ ತೆಗೆದುಕೊಳ್ಳದೆ ಕರೊನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಕೇವಲ 5 ದಿನದಲ್ಲಿ ಕರ್ತವ್ಯದಿಂದ ನಿವೃತ್ತಿ ಹೊಂದಬೇಕಿದ್ದ ಇವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
1992ರಲ್ಲಿ ಎಸ್ಪಿ ಹರಿಕೃಷ್ಣ ಹಾಗೂ ಎಸ್ಐ ಶಕೀಲ್ ಅಹಮದ್ ಜೊತೆ ಕಾಡುಗಳ್ಳ ವೀರಪ್ಪನ ಜತೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ನಡೆದ ಚಕಮಕಿಯಲ್ಲಿ ಏಳು ಗುಂಡುಗಳು ದೇಹ ಹೊಕ್ಕಿದ್ದವು. ಇದರ ಹೊರತಾಗಿಯೂ ಸಿದ್ದರಾಜನಾಯಕ್ ಬದುಕುಳಿದಿದ್ದರು. ನಂತರ ನಾಲ್ಕು ಗುಂಡುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಾಗಿತ್ತು. ಇನ್ನೂ ಮೂರು ಗುಂಡುಗಳು ತಲೆಯಲ್ಲಿಯೂ ಉಳಿದುಕೊಂಡಿದ್ದವರು.