ಹೆಚ್.ಎಸ್.ದೊರೆಸ್ವಾಮಿ ನಿಧನ: ಕೊವಿಡ್ ನಿಯಮಾನುಸಾರ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂಸ್
ಬೆಂಗಳೂರು : ಕೊರೋನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಹೆಚ್ ಎಸ್ ದೊರೆಸ್ವಾಮಿ ಅವರಿಗೆ 104 ವರ್ಷಗಳಾಗಿತ್ತು. ಇಂದು ಹೃದಯಾಘಾತದಿಂದಾಗಿ ನಿಧನರಾಗಿದ್ದರು.
ಅವರ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮದೊಂದಿಗೆ ಸಕಲ ಸರ್ಕಾರಿ ಗೌರವಗಳಿಂದ ಅಂತ್ಯಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಸರ್ಕಾರಿ ಗೌರವಗಳೊಂದಿಗೆ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗುವುದು. ಕೊವಿಡ್ ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಬಂದಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ ಉಸ್ತುವಾರಿಯಲ್ಲಿ ಕೊವಿಡ್ ನಿಯಮಾನುಸಾರವೇ, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು.
ಈ ಕುರಿತಂತೆ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅಧಿಸೂಚನೆ ಹೊರಡಿಸಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿಯವರು, ದಿನಾಂಕ 26-05-2021ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ಸೂಚಿಸುತ್ತದೆ.
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿದ್ದಾರೆ.