ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಆಗಷ್ಟೇ ಹುಟ್ಟಿದ್ದ ಮಗು ನರ್ಸ್ ಕೈಯಿಂದ ಜಾರಿ ಬಿದ್ದು ಸಾವು | ಜನತಾ ನ್ಯೂಸ್
ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ದೇವರಳ್ಳಿ ಗ್ರಾಮದ ತಿಮ್ಮೇಶ್ ಮತ್ತು ಲಕ್ಷ್ಮಿ ದಂಪತಿಯ ನವಜಾತ ಶಿಶು ಸಾವನ್ನಪ್ಪಿದೆ.
ಸೋನು ಎಂಬ ಮಹಿಳೆಗೆ ಇಂದು ಮುಂಜಾನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆಕೆ ಮನೆಯವರು ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಕೋವಿಡ್ ರಿಪೋರ್ಟ್ ಇಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.
ಆದರೆ ಇಂದು ಬೆಳಗ್ಗೆ 6 ಗಂಟೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಬೆಳಗ್ಗೆ 8ರ ವೇಳೆಗೆ ಆಸ್ಪತ್ರೆಗೆ ಆಕೆಯನ್ನ ಕುಟುಂಬಸ್ಥರು ಕರೆದುಕೊಂಡು ಬಂದಿದ್ದರು.
ಆಸ್ಪತ್ರೆ ಬಾಗಿಲಲ್ಲಿ 2 ಗಂಟೆ ಕಾದರೂ ವೈದ್ಯರು ದಾಖಲು ಮಾಡಿಕೊಂಡಿರಲಿಲ್ಲ. ನಂತರ ಇಂದು ಬೆಳಗ್ಗೆ ಲಕ್ಷ್ಮಿ ಅವರು ಗಂಡು ಮಗುವಿಗೆ ಆಸ್ಪತ್ರೆಯಲ್ಲಿ ಜನನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದ ಸಾಕಮ್ಮ ಎಂಬ ನರ್ಸ್.. ವೈದ್ಯರು ಇಲ್ಲದೇ ಇದ್ದರೂ ಹೆರಿಗೆ ಮಾಡಿಸಿದ್ದಾರೆ ಎನ್ನಲಾಗಿದೆ.
ಆದರೆ ಮಗುವನ್ನು ಕೈಗೆ ತೆಗೆದುಕೊಂಡಿದ್ದ ಸಂದರ್ಭದಲ್ಲಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಅಲ್ಲದೇ ದೇವರಳ್ಳಿ ಆಸ್ಪತ್ರೆ ಎದರು ಜಮಾಯಿಸಿ ಆಸ್ಪತ್ರೆ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.
ಈ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಮಿಮ್ಸ್ ನಿರ್ದೇಶಕ ಡಾ.ಹರೀಶ್ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥೆ ಡಾ.ಎಚ್.ಸಿ.ಸವಿತಾ, ನಿನ್ನೆಯೇ ಅಡ್ಮಿಷನ್ ಆಗಿದ್ರೆ ಇದೆಲ್ಲ ಆಗುತ್ತಲೇ ಇರಲಿಲ್ಲ. ನಿನ್ನೆ ಆಸ್ಪತ್ರೆಗೆ ಬಂದಾಗ ಪರೀಕ್ಷೆ ವೇಳೆ ಮಗುವಿನ ಎದೆ ಬಡಿತ ಕೇಳಿಸಿರಲಿಲ್ಲ. ಸ್ಕ್ಯಾನಿಂಗ್ ಮಾಡಿದಾಗ ಹೊಟ್ಟೆಯೊಳಗೆ ಮಗು ಸಾವನ್ನಪ್ಪಿತ್ತು. ನಿನ್ನೆಯೇ ಅಡ್ಮಿಷನ್ ಮಾಡುವಂತೆ ಹೇಳಿದ್ರೂ ಮಾಡಿರಲಿಲ್ಲ. ಇವತ್ತು ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರೆದುಕೊಂಡು ಬಂದಿದ್ರು. ಕರೊನಾ ಆರ್ಟಿಪಿಸಿಆರ್ ರಿಪೋರ್ಟ್ ಬಂದಿರಲಿಲ್ಲ. ಹಾಗಾಗಿ ಆಯಂಟಿಜನ್ ಟೆಸ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗುತ್ತಿತ್ತು. ಮನೆಯವರಿಗೆ ಆಭರಣ ಕೊಡುವುದಾಗಿ ಗರ್ಭಿಣಿ ಹೊರಗೆ ಹೋದಾಗ ಹೆರಿಗೆ ಆಗಿದೆ. ಬೆಳಗ್ಗೆ 8 ಗಂಟೆಗೇ ಗರ್ಭಿಣಿಯನ್ನು ಕರೆದುಕೊಂಡು ಬಂದಿಲ್ಲ ಎಂದಿದ್ದಾರೆ.