ಜನ್ಮದಿನಕ್ಕೆ ಬಟ್ಟೆ ಕೊಡಿಸಲಿಲ್ಲ ಅಂತ ನವವಿವಾಹಿತೆ ಆತ್ಮಹತ್ಯೆ: ಕೊಲೆ ಕೇಸು ದಾಖಲು! | ಜನತಾ ನ್ಯೂಸ್
ಚಿಕ್ಕಬಳ್ಳಾಪುರ : ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸದೇ ಗಂಡ ರೇಗಾಡಿದ್ದರಿಂದ ನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಪುತ್ರಿ ಮಮತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. 17 ವರ್ಷದ ವಿವಾಹಿತೆ ಮಮತಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ಮಮತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು ಮೃತ ಮಮತಾಳ ಪೋಷಕರು ಪತಿಯೇ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಬಂಧಿತ ಮಹಾದೇವ್ ಅಪ್ರಾಪ್ತೆಯನ್ನು ಪ್ರೀತಿಸಿ ಕಾನೂನುಬಾಹಿರವಾಗಿ ಬಲವಂತವಾಗಿ ಮದುವೆಯಾಗಿದ್ದನಂತೆ. ಮಹಾದೇವ್ ಅಲಿಯಾಸ್ ಮಣಿಕಂಠನೇ ನನ್ನ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. ಪ್ರೀತಿ ಹೆಸರಲ್ಲಿ ಮದುವೆಯಾಗಿ ನಂಬಿಸಿ ಮೋಸ ಮಾಡಿ ಈಗ ಕೊಲೆನೂ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
2020 ಜನವರಿಯಲ್ಲಿ ಗೌರಿಬಿದನೂರು ತಾಲ್ಲೂಕಿನ ಆಲಿಪುರದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದದ ಮಮತಾಳನ್ನು ಮಹದೇವ ಅಲಿಯಾಸ್ ಮಣಿಕಂಠ ಪ್ರೀತಿ ಪ್ರೇಮದ ಹೆಸರಲ್ಲಿ ಅಪಪರಿಸಿ ಮದುವೆ ಆಗಿದ್ದಾನೆ ಎಂದು ಮಮತಾ ಪೋಷಕರು ಮಂಚೇನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.
ಮಮತಾಳನ್ನ ಸಾಂತ್ವಾನ ಕೇಂದ್ರದಲ್ಲಿ ಬಿಟ್ಟು ಬಳಿಕ ಪೋಷಕರು ಮನೆಗೆ ಕರೆದುಕೊಂಡು ಬಂದಿದ್ದರು. ಆದರೆ ಮಣಿಕಂಠ ಜೊತೆ ಮಮತಾ 3 ತಿಂಗಳ ಹಿಂದೆ ಮದುವೆ ಆಗಿದ್ದು, ಈ ಬಗ್ಗೆ ಬಾಯಿಬಿಟ್ಟರೆ ಮಮತಾಳನ್ನು ಸಾಯಿಸುವುದಾಗಿ ಪೋಷಕರಿಗೆ ಬೆದರಿಸಿದ್ದನಂತೆ.
ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಮತ ಗಂಡ ಮಣಿಕಂಠ, ಅತ್ತೆ ಮಾವನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.