ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ.. ಸಚಿವ ಆರ್ ಅಶೋಕ್ ಹೇಳಿದ್ದೇನು? | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ಈ ಬಗ್ಗೆ ಚಟುವಟಿಕೆಗಳೂ ನಡೆಯುತ್ತಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೆಹಲಿಯಲ್ಲಿ ಶಾಸಕರು, ಸಚಿವರು ಇರೋದು ನಿಜ. ನಿನ್ನೆಯಿಂದ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಗಮನಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಆದರೆ ಅದಕ್ಕಿಂತ ಮುಖ್ಯ ಕೊರೊನಾ ವಿರುದ್ಧದ ಹೋರಾಟ. ಸೋಂಕನ್ನು ಹತೋಟಿಗೆ ತರಲು ಕೆಲಸ ಮಾಡುತ್ತಿದ್ದೇವೆ. ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಬೇಕಿದೆ. ರಾಜ್ಯದಲ್ಲಿ ಬೆಡ್ ಹಾಗೂ ಆಕ್ಸಿಜನ್ ಸಮಸ್ಯೆ ಇಲ್ಲ. ಆದರೆ, ವೆಂಟಿಲೇಟರ್ ಬೇಕಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಬ್ಲ್ಯಾಕ್ ಫಂಗಸ್ ಭೂತದ ರೀತಿ ಕಾಡುತ್ತಿದೆ. ಇದರ ಬಗ್ಗೆ ಗಮನಹರಿಸಬೇಕಿದೆ ಎಂದರು.