ಕೋವಿಡ್ನಿಂದ ಮಡಿದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಸರ್ಕಾರಿ ನೌಕರಿ ಪತ್ರ | ಜನತಾ ನ್ಯೂಸ್
ಬೆಂಗಳೂರು : ಕೊವಿಡ್ನಿಂದ ನಿಧನರಾದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ನೌಕರಿ ನೀಡಿದೆ. ನೌಕರಿಯ ನೇಮಕಾತಿ ಪತ್ರವನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಂದು ವಿತರಣೆ ಮಾಡಿದ್ದಾರೆ.
ಕೋವಿಡ್ನಿಂದ ರಾಜ್ಯದಲ್ಲಿ ಈವರೆಗೆ 130 ಮೃತ ಶಿಕ್ಷಕರ ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಲಾಗಿದೆ.ಕೊರೊನಾದಿಂದಾಗಿ ಶಿಕ್ಷಣ ಪರಿವಾರದ ಅನೇಕ ಶಿಕ್ಷಕರು ಅಗಲಿದ್ದಾರೆ. ಇದರಿಂದ ನಾಡಿಗೆ ಅಪಾರ ನಷ್ಟವಾಗಿದೆ. ಕುಟುಂಬಗಳಷ್ಟನ್ನೇ ಅಲ್ಲದೇ, ನಮ್ಮ ನಾಡಿನ ಶಾಲಾ ಮಕ್ಕಳೂ ತಮ್ಮ ನೆಚ್ಚಿನ ಶಿಕ್ಷಕರನ್ನು ಕಳೆದುಕೊಂಡಿದ್ದಾರೆ.
ಇಂತಹ ಸಂದರ್ಭದಲ್ಲಿ ಶಿಕ್ಷಕರ ಕುಟುಂಬಗಳಿಗೆ ತಕ್ಷಣವೇ ಸ್ಪಂದಿಸಿ ಮೃತರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.