ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಮತ್ತಿಬ್ಬರು ಅರೆಸ್ಟ್ | ಜನತಾ ನ್ಯೂಸ್
ಬೆಂಗಳೂರು : ಕೋವಿಡ್ ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಈವರೆಗೆ ಹತ್ತು ಜನರನ್ನ ಅರೆಸ್ಟ್ ಮಾಡಲಾಗಿತ್ತು. ನಿನ್ನೆ ಮತ್ತೆ ಇಬ್ಬರನ್ನ ಅರೆಸ್ಟ್ ಮಾಡಲಾಗಿದೆ.
ವರುಣ್ ಹಾಗೂ ಯಶವಂತ ಕುಮಾರ್ ಬಂಧಿತ ಆರೋಪಿಗಳು. ಈ ಪೈಕಿ ವರುಣ್ ಬಿಬಿಎಂಪಿ ದಕ್ಷಿಣ ವಲಯ ಕೊವಿಡ್ ವಾರ್ ರೂಂ ಹೆಲ್ಪ್ ಲೈನ್ನಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಪ್ರಕರಣಗಳು ಹೆಚ್ಚಾದ ಕಾರಣ ನಗರದ ಆಸ್ಪತ್ರೆಗಳಲ್ಲಿ ಬೆಡ್ ಅಭಾವ ಸೃಷ್ಟಿಯಾಗತೊಡಗಿತ್ತು. ಈ ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡ ವರುಣ್, ಬೆಡ್ ಅಗತ್ಯವಿದ್ದವರ ಮೊಬೈಲ್ ನಂಬರ್ ಸಂಗ್ರಹಿಸಿ ಸ್ನೇಹಿತ ಯಶವಂತ ಕುಮಾರ್ ಮೂಲಕ ಕರೆ ಮಾಡಿಸುತ್ತಿದ್ದ.
ಐಸಿಯುನಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯವಿರುವ ಬೆಡ್ ಕೊಡಿಸುವುದಾಗಿ ಭರವಸೆ ನೀಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ. ಬಳಿಕ ಬ್ಯಾಂಕ್ ಅಕೌಂಟ್ ನಂಬರ್ ನೀಡಿ ರೋಗಿಯ ಕುಟುಂಬಸ್ಥರಿಂದ ಹಣ ಹಾಕಿಸಿಕೊಳ್ಳುತ್ತಿದ್ದ. ಹಣ ಪಡೆದು ಸರ್ಕಾರಿ ಕೋಟಾದಡಿ ಬೆಡ್ ಬ್ಲಾಕ್ ಮಾಡಿಸುತ್ತಿದ್ದ.
ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂದೀಪ್ ಪಾಟೀಲ್, ಈ ಪ್ರಕರಣ ಸಂಬಂಧ ಒಟ್ಟು ಹನ್ನೆರಡು ಜನರನ್ನ ಅರೆಸ್ಟ್ ಮಾಡಿದ್ದೀವಿ. ವಾರ್ ರೂಮ್ನಲ್ಲಿ ಕೆಲಸ ಮಾಡ್ತಿದ್ದ ವರುಣ್ ಹಾಗೂ ಆತನ ಸ್ನೇಹಿತ ಯಶವಂತ್ನನ್ನ ನಿನ್ನೆ ಬಂಧಿಸಿದ್ದೇವೆ ಎಂದರು.