ಕೊರೊನಾಗೆ ಒಂದೇ ಕುಟುಂಬದ ಮೂವರು ಬಲಿ | ಜನತಾ ನ್ಯೂಸ್
ಮಂಗಳೂರು : ಕರೊನಾಗೆ ಒಂದೇ ಕುಟುಂಬದ ಮೂವರ ಪ್ರಾಣಹೋಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಾಂಧಿನಗರದಲ್ಲಿ ಸಂಭವಿಸಿದೆ.
ಪುರಲ್ಲ (92), ಇವರ ಮಗಳು ಅಪ್ಪಿ (45) ಮತ್ತು ಅಪ್ಪಿಯ ಗಂಡ ಗುರುವ (52) ಮೃತ ದುರ್ದೈವಿಗಳು.
ಬೆಳ್ತಂಗಡಿ ತಾಲೂಕಿನ ಗಾಂಧಿನಗರದಲ್ಲಿ ವಾಸವಿದ್ದ ಕುಟುಂಬಕ್ಕೆ ಕೋವಿಡ್ ಸೋಂಕು ತಗುಲಿ ಮನೆಯ ಯಜಮಾನ ಪುರಲ್ಲ (92) ಮೇ.13 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಇದಾದ ನಂತರ ಪುರಲ್ಲರ ಮಗಳು ಅಪ್ಪಿ (45) ಮೇ.23 ರಂದು ಮೃತಪಟ್ಟರು. ಆನಂತರ ಅಪ್ಪಿ ಪತಿ ಗುರುವ (52) ಮೇ.27 ರಂದು ಸೋಂಕಿಗೆ ಬಲಿಯಾಗಿದ್ದಾರೆ. ಒಂದೇ ಕುಟುಂಬದ ಮೂವರ ಸಾವಿನಿಂದ ಕುಟುಂಬಸ್ಥರ ಅಳು ಮುಗಿಲು ಮುಟ್ಟಿದೆ.
English summary :Mangalore