ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಸಂಪೂರ್ಣ ಲಾಕ್ ಡೌನ್! | ಜನತಾ ನ್ಯೂಸ್
ಶಿವಮೊಗ್ಗ : ಜಿಲ್ಲೆಯಾದ್ಯಂತ ಮೇ 31 ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದ ಜನರು ಇದುವರೆಗೆ ಸಹಕಾರ ನೀಡಿದ್ದಾರೆ. ಮುಂದೆಯೂ ಅದೇ ರೀತಿ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ. ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ.
ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
- ಹಾಲು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ
- ತರಕಾರಿ ಖರೀದಿಗೆ ತಳ್ಳುವ ಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ.
- ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ಅವಕಾಶ ಕೊಡಲಾಗಿದೆ.
- ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರ್ಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ.
- ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ.
ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.