ಸರ್ಕಾರದ 28 ಲಕ್ಷ ವೆಚ್ಚದಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ಳುವವರಿಂದ ನೀತಿ ಪಾಠ ಕಲಿಯಬೇಕಿಲ್ಲ | ಜನತಾ ನ್ಯೂಸ್
ಮೈಸೂರು : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ 28 ಲಕ್ಷ ವೆಚ್ಚದಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ಳುವವರಿಂದ ಜನಪ್ರತಿನಿಧಿ ಬುದ್ದಿ ಕಲಿಸುವ ಅಗತ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸ್ವಂತ ಹಿತಾಸಕ್ತಿಗಾಗಿ ಮೋಜು ಮಸ್ತಿಮಾಡಲು 28 ಲಕ್ಷ ರೂ. ಖರ್ಚು ಮಾಡಿ ಸ್ವಿಂಗ್ ಫೋಲ್ ಕಟ್ಟಿಸುವ ಅಗತ್ಯವಿತ್ತೆ. ಇಂತವರಿಂದ ಜನಪ್ರತಿನಿಧಿಗಳಾದ ನಾವು ಪಾಠ ಕಲಿಯಬೇಕಿಲ್ಲ ಎಂದರು.
ಸಾರ್ವಜನಿಕರಿಗೆ ಇದರ ಲೆಕ್ಕ ಕೊಡಿ. ಸ್ವಿಮ್ಮಿಂಗ್ ಪೂಲ್ ಕಟ್ಟಿಸಲು ಟೆಂಡರ್ ಕಾಯ್ದೆ ನೋಡಿದ್ದೀರಾ..? ಪಾರಂಪರಿಕ ನಿಯಮ ಪಾಲಿಸಿದ್ದೀರಾ..?ಮೈಸೂರು ಮಹಾನಗರ ಪಾಲಿಕೆಯಿಂದ ಪರ್ಮಿಷನ್ ಪಡೆದಿದ್ದೀರಾ..? ಇದಾವುದಕ್ಕೂ ನಿಯಮ ಪಾಲಿಸಿಲ್ಲವೆಂದ ಮೇಲೆ, ಔಷಧಿ ಖರೀದಿಗೆ ಟೆಂಡರ್ ಕಾಯ್ದೆ ಬೇಕಾ..? 16 ಸ್ಟೆಪ್ ಡೌನ್ ಆಸ್ಪತ್ರೆ ತೆರೆಯಲು ಕಮಿಟಿ ವರಿದಿ ನೀಡಿದ್ಯಾ..?. ರಾಜ್ಯದ ಬೊಕ್ಕಸ ಬರಿದಾಗಿರುವ ಸಂದರ್ಭದಲ್ಲಿ ಸರ್ಕಾರಿ ದುಡ್ಡಲ್ಲಿ ಮೋಜು ಮಸ್ತಿಗಾಗಿ ಸ್ವಿಮ್ಮಿಂಗ್ ಪೂಲ್ ಅವಶ್ಯಕತೆ ಇದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸಂಕಷ್ಟಕ್ಕೆ ಸ್ಪಂದಿಸಲೆಂದೇ ಪ್ರಧಾನಿಯವ್ರು ದೇಶಾದ್ಯಂತ 1 ಲಕ್ಷ ವೆಂಟಿಲೇಟರ್ ಕೊಟ್ಟಿದ್ದಾರೆ. ಆದರೆ ಈಗಲೂ ಕೂಡ ಇಲ್ಲದ ಸಬೂಬು ಹೇಳಿ ಅಳವಡಿಸದೆ ಹಾಗೆ ಇಟ್ಟಿದ್ದಾರೆ. ಇವುಗಳನ್ನೆಲ್ಲಾ ಕೇಳಿದ್ರೆ ತಪ್ಪಾ ಪಿಎಂ ಕೇರ್ ನಿಂದ ಬಂದ 40 ವೆಂಟಿಲೇಟರ್ ಗಳನ್ನ ಇನ್ನು ಅಳವಡಿಕೆ ಮಾಡಿಲ್ಲಇದು ಜಿಲ್ಲಾ ಅಧಿಕಾರಿಗಳ ವೈಫಲ್ಯ ತೋರಿಸುತ್ತೆ. ಇದನ್ನ ಕೇಳಿದ್ರೆ ಜನಪ್ರತಿನಿಧಿಗಳು, ಅಧಿಕಾರಿಗಳ ಮದ್ಯೆ ಅಸಹಕಾರ ಹೇಗಾಗುತ್ತೆ.
ಸ್ಟೆಪ್ ಡೌನ್ ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಪಾಲಿಸದೆ ನಾಯಿ ಕೊಡೆಗಳಂತೆ ತಲೆ ಎತ್ತಿದ್ದವು. ಶಾಸಕ ರಾಮದಾಸ್ ಅವರು ಅಲ್ಲಿಗೆ ಹೋಗಿ ನಿಯಮ ಉಲ್ಲಂಘನೆ ಮಾಡಿರುವುದನ್ನು ಪತ್ತೆ ಹಚ್ಚಿದ್ದರು. ಈ ಆಸ್ಪತ್ರೆಗಳಿಗೆ ಯಾವ ಹಿತಾಸಕ್ತಿ ಮೇಲೆ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿದ್ದರು. ಇದರಲ್ಲಿ ಬೇರೆ ಏನಾದರು ಅನುಕೂಲ ಇತ್ತೆ ಎಂದು ಅನುಮಾನ ವ್ಯಕ್ತಪಡಿಸಿದರು.