ಅನಾಥಾಶ್ರಮದಲ್ಲಿ 270 ಮಂದಿಯಲ್ಲಿ 210 ಮಂದಿಗೆ ಸೋಂಕು ದೃಢ! | ಜನತಾ ನ್ಯೂಸ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದಲ್ಲಿರುವ ಸಿಯೋನ್ ಆನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ.
ಆಶ್ರಮದ 270 ಜನರಲ್ಲಿ 210 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮೂಹಿಕ ಪರೀಕ್ಷೆಯನ್ನು ಮಾಡಿದ್ದು, ಈ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೊವೀಡ್ ಕೇರ್ ಸೆಂಟರ್ಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವ್ಯವಸ್ಥೆ ಮಾಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ದ ರಜತಾದ್ರಿ ವಸತಿ ಗೃಹವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು, ಅಲ್ಲಿಗೆ ಸೋಂಕಿತರನ್ನು ಶಿಫ್ಟ್ ಮಾಡಿರುವುದಾಗಿ ತಿಳಿಸಲಾಗಿದೆ.