ಕೊರೊನಾಗೆ 1 ವರ್ಷದ ಕಂದಮ್ಮ ಬಲಿ | ಜನತಾ ನ್ಯೂಸ್
ಶಿವಮೊಗ್ಗ : ಕೊರೊನಾ ಸೋಂಕಿಗೆ ಒಂದು ವರ್ಷದ ಕಂದಮ್ಮ ಬಲಿಯಾದ ಮನಕಲಕುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಉದಮ್ ಶಿವಮೊಗ್ಗ ಗಾಂಧಿ ಬಜಾರ್ ಮಡಿವಾಳರ ಕೇರಿಯ ಉದಯ್ ಹಾಗೂ ಚೈತ್ರ ದಂಪತಿಯ ಪುತ್ರ. ಉದಮ್ಗೆ ಬಿಳಿ ರಕ್ತ ಕಣ ಹೆಚ್ಚಾಗಿದೆಯೆಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ಆಕ್ಸಿಜನ್ ಕೊರತೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ಬಳಿಕ ಉದಮ್ಗೆ ಕೋವಿಡ್ ದೃಢವಾಗಿತ್ತು.
ಚಿಕಿತ್ಸೆ ಪಡೆಯುತ್ತಿದ್ದ ಮಗು ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದೆ. ಮಗು ಮೃತಪಟ್ಟ ನಂತರ ಹೆತ್ತವರು ಹಾಗೂ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ. ಮಗುವನ್ನು ಕಳೆದುಕೊಂಡು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಸರಿಯಾಗಿ ಆಕ್ಸಿಜನ್ ವ್ಯವಸ್ಥೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮಗುವಿನ ಸ್ಥಿತಿ ಗಂಭೀರವಾಯ್ತು. ಬಳಿಕ ಖಾಸಗಿ ಆಸ್ಪತ್ರೆಯ ವೈದ್ಯರು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚನೆ ನೀಡಿದರು. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಮದ್ಯಾಹ್ನ ಮಗುವನ್ನು ದಾಖಲಿಸಿದ್ವಿ. ಆದರೆ ಕೊವಿಡ್ ಪರೀಕ್ಷೆ ವರದಿ ಬಂದು ಎರಡು ಘಂಟೆಯಲ್ಲೇ ಮಗು ಸಾವನ್ನಪ್ಪಿದೆ. ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿರೋದು ಎಂದು ಮೃತ ಮಗುವಿನ ತಂದೆ ಗಂಭೀರ ಆರೋಪ ಮಾಡಿದ್ದಾರೆ.