ಸೆಂಟ್ರಲ್ ವಿಸ್ತಾ ಯೋಜನೆ ಮುಂದುವರಿಸಲು ಹೈಕೋರ್ಟ್ ಸಮ್ಮತಿ! | ಜನತಾ ನ್ಯೂಸ್
ನವದೆಹಲಿ : ದೇಶದಲ್ಲಿ ಕೋವಿಡ್ ಸಾಂಕ್ರಾಮಿಕವು ಏರುಗತಿಯಲ್ಲಿ ಸಾಗುತ್ತಿದ್ದು, ಈ ನಡುವೆ ಪ್ರಧಾನಿ ನಿವಾಸ ಹಾಗೂ ಸಂಸತ್ ಭವನಗಳ ಮರುನಿರ್ಮಾಣದ ಸೆಂಟ್ರಲ್ ವಿಸ್ತಾ ಯೋಜನೆ ಮುಂದುವರಿದಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತಾಂದತೆ ದಿಲ್ಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಸೆಂಟ್ರಲ್ ವಿಸ್ತಾ ಒಂದು ಪ್ರಮುಖ ಮತ್ತು ಅಗತ್ಯ ರಾಷ್ಟ್ರೀಯ ಯೋಜನೆಯಾಗಿದ್ದು, ಆ ಯೋಜನೆಯಡಿ ನಡೆಯುತ್ತಿರುವ ನಿರ್ಮಾಣ ಕಾರ್ಯವನ್ನು ಮುಂದುವರಿಸಲು ದೆಹಲಿ ಹೈಕೋರ್ಟ್ ಸೋಮವಾರ ಅನುಮತಿ ನೀಡಿದ್ದು ಕಾಮಗಾರಿ ರದ್ಧತಿ ಕೋರಿದ್ದ ಅರ್ಜಿದಾರರಿಗೆ ನ್ಯಾಯಾಲಯ ₹1 ಲಕ್ಷ ದಂಡ ವಿಧಿಸಿದೆ.
ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೈಬಿಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ, ಇದೊಂದು ಪ್ರಚೋದಿತ (ಮೋಟಿವೇಟೆಡ್ ಪ್ಲೀ) ಅರ್ಜಿಯಾಗಿದ್ದು, ಇದರಲ್ಲಿ ನಿಜವಾದ ಸಾರ್ವಜನಿಕ ಹಿತಾಸಕ್ತಿಯಿಲ್ಲ ಎಂದು ಹೇಳಿತು. ಜತೆಗೆ, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿದೆ.