ಕುತೂಹಲ ಕೆರಳಿಸಿದ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿ ಪ್ರಯಾಣ! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ ತಾರಕಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಯಡಿಯೂರಪ್ಪ ಪುತ್ರ ದೆಹಲಿ ಭೇಟಿ ಅಚ್ಚರಿ ಮೂಡಿಸಿದೆ.
ಮಂಗಳವಾರ ಬೆಳಿಗ್ಗೆ 5.30ರ ವಿಮಾನದಲ್ಲಿ ಬೆಂಗಳೂರಿನಿಂದ ತಮ್ಮ ಆಪ್ತರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸಿದ ಬಿ.ವೈ ವಿಜಯೇಂದ್ರ, ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುವ ಸಾಧ್ಯತೆಯ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ, ವಿಜಯೇಂದ್ರ ಅವರ ಈ ದಿಢೀರ್ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ ಇದು ಯಾವುದೇ ನಿಗದಿತ ರಾಜಕೀಯಭೇಟಿಯಲ್ಲ. ಸಧ್ಯ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳೂ ನಡೆಯುತ್ತಿಲ್ಲ. ಬೇರೆ ಕಾರಣಗಳಿಗಾಗಿ ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಆಪ್ತರೊಂದಿಗೆ ವಿಜಯೇಂದ್ರ ದೆಹಲಿ ಪ್ರಯಾಣ ತೀವ್ರ ಕುತೂಹಲವನ್ನು ಮೂಡಿಸಿದೆ.