ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ, ಜಗಳ ಬಿಡಿಸಲು ಬಂದ ಅತ್ತಿಗೆಗೂ ಚಾಕು ಇರಿತ! | ಜನತಾ ನ್ಯೂಸ್
ಮಂಡ್ಯ : ಆಸ್ತಿ ವಿಚಾರಕ್ಕೆ ತಮ್ಮನೇ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಜರುಗಿದೆ.
ಅರಳಕುಪ್ಪೆ ಗ್ರಾಮದ ಬಾಲಕೃಷ್ಣ (54) ಮೃತ ದುರ್ದೈವಿ ಅಣ್ಣನಾಗಿದ್ದು, ಸುರೇಶ್ ಕೊಲೆ ಮಾಡಿದ ತಮ್ಮನಾಗಿದ್ದಾನೆ.
ಬಾಲಕೃಷ್ಣ ಮತ್ತು ಸುರೇಶ್ ಇಬ್ಬರೂ ಸಹೋದರರು. ಮೈಸೂರಿನಲ್ಲಿ ವಾಸ ಮಾಡ್ತಿದ್ದ ಬಾಲಕೃಷ್ಣ ಲಾಕ್ಡೌನ್ ಹಿನ್ನೆಲೆ ಊರಿಗೆ ಬಂದಿದ್ದ. ಜಮೀನು ವಿಚಾರದಲ್ಲಿ ಬಾಲಕೃಷ್ಣ ಹಾಗೂ ಸುರೇಶ್ ನಡುವೆ ಈ ಹಿಂದೆ ಜಗಳವಾಗಿತ್ತು. ಹೀಗಾಗಿ ಒಂದೇ ಮನೆಯ ಮಧ್ಯೆ ಗೋಡೆ ಹಾಕಿಕೊಂಡು ಬೇರೆ ಬೇರೆ ವಾಸ ಮಾಡುತ್ತಿದ್ದರು.
ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಸುರೇಶ್ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಜಗಳ ಬಿಡಿಸಲು ಹೋದ ಬಾಲಕೃಷ್ಣನ ಪತ್ನಿ ಸರಳಾಗೆ ಮೈದುನ ಸುರೇಶ್ ಚಾಕು ಹಾಕಿದ್ದಾನೆ. ಬಳಿಕ ಅಣ್ಣ ಬಾಲಕೃಷ್ಣ(54)ನನ್ನು ಕೊಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ಸರಳಾರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.