ಕೊರೊನಾಗೆ ಹೆದರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | ಜನತಾ ನ್ಯೂಸ್
ಚಾಮರಾಜನಗರ : ಕೊರೊನಾದಿಂದ ಹೆದರಿ ಪತಿ, ಪತ್ನಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಮೂಕಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಮಹದೇವಪ್ಪ 47 ವರ್ಷ, ಅವರ ಪತ್ನಿ ಮಂಗಳಮ್ಮ 40 ವರ್ಷ , ಅವರ ಮಕ್ಕಳಾದ ಜ್ಯೋತಿ 14 ವರ್ಷ, ಶ್ರುತಿ (12 ವರ್ಷ) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಾದೇವಪ್ಪನಿಗೆ ಇಪ್ಪತ್ತು ದಿನದ ಹಿಂದೆ ಕೋವಿಡ್ ಬಂದು ಗುಣಮುಖನಾಗಿದ್ದ. ಕೋವಿಡ್ ಸೋಂಕಿಗೆ ಹೆದರಿ ಇವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ಕಟುಂಬವು ಆರ್ಥಿಕ ಸಂಕಷ್ಟದಿಂದ ಬಳಲುತ್ತಿತ್ತು ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಗ್ರಾಮದವರೊಬ್ಬರು ಮಹಾದೇವಪ್ಪ ಅವರನ್ನು, ಕಬ್ಬಿನ ತೊಂಡೆ ತರುವ ಸಲುವಾಗಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಮನೆಯೊಳಗಿನಿಂದ ಯಾವುದೇ ಶಬ್ದ ಬರಲಿಲ್ಲ.
ಒಳಗೆ ನೇಣುಬಿಗಿದ ಸ್ಥಿತಿಯಲ್ಲಿ ನಾಲ್ವರ ಶವ ನೇತಾಡುವುದು ಕಂಡು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.