ಸರ್ಕಾರದ ವತಿಯಿಂದ ಕೊರೊನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ! | ಜನತಾ ನ್ಯೂಸ್
ಬೆಂಗಳೂರು : ಕೊವಿಡ್ನಿಂದ ಮೃತಪಟ್ಟಿರುವವರ ಮುಕ್ತಿ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತು. ಇಂದು ಸಾಮೂಹಿಕ ಅಸ್ಥಿ ವಿಸರ್ಜನಾ ಕಾರ್ಯದಲ್ಲಿ ಆರ್. ಅಶೋಕ್ ಭಾಗಿಯಾಗಿದ್ದಾರೆ.
ಕಾವೇರಿ ನದಿಗೆ ಸಾವಿರಕ್ಕೂ ಹೆಚ್ಚು ಅಸ್ಥಿಗಳ ಸಾಮೂಹಿಕ ವಿಸರ್ಜನೆ ಮಾಡಲಿದ್ದು, ಶ್ರೀ ಕಾಶಿ ವಿಶ್ವೇಶ್ವರ ದೇವಾಲಯ ಸಮೀಪದ ಕಾವೇರಿ ನದಿ ಬಳಿ ಕಾರ್ಯಕ್ರಮ ನಡೆಯುತ್ತಿದೆ.
ಕೊವಿಡ್-19 ಸೋಂಕಿನಿಂದ ಮೃತಪಟ್ಟ 1,000 ಜನರ ಅಸ್ಥಿಯನ್ನು ಸರ್ಕಾರದ ವತಿಯಿಂದ ಅಸ್ಥಿ ವಿಸರ್ಜನೆ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳವಾಡಿಯ ಅನ್ನಪೂರ್ಣೇಶ್ವರಿ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.
ಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೊವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಮೃತರ ಚಿತಾಭಸ್ಮವನ್ನು ಹಾಗೇ ಶೇಖರಿಸಿ ಇಡಲಾಗಿತ್ತು. ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.