ಇಂದು ಸಂಜೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ | ಜನತಾ ನ್ಯೂಸ್
ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ. ಲಾಕ್ ಡೌನ್ ಕುರಿತಂತೆ ಮಹತ್ವದ ಮಾಹಿತಿ ನೀಡುವ ಸಾಧ್ಯತೆಯಿದೆ.
ವಿಳಂಬವಾಗುತ್ತಿರುವ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಇದೇ ವೇಳೆ ಸಿಎಂ ಎರಡನೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯೂ ಇದೆ.
ಬಹುತೇಕ ಒಂದು ವಾರ ಲಾಕ್ ಡೌನ್ ವಿಸ್ತರಣೆ ಆಗಲಿದೆ ಎನ್ನಲಾಗಿದೆ. ಆದರೆ ಇದೇ ವೇಳೆ ಹಲವು ವಲಯಗಳಿಗೆ ವಿನಾಯತಿ ನೀಡುವ ಸಾಧ್ಯತೆಯಿದೆ. ರಫ್ತು ವಲಯಕ್ಕೆ ಈಗಾಗಲೇ ವಿನಾಯತಿ ನೀಡಿದ್ದು, ಇನ್ನೂ ಕೆಲವು ವಲಯಗಳಿಗೆ ಅನ್ ಲಾಕ್ ಮಾಡುವ ಸಾಧ್ಯತೆಯಿದೆ.