ಗಂಡನ ಹಣದಾಹಕ್ಕೆ ಬಲಿಯಾದ ಸ್ಟಾಫ್ ನರ್ಸ್: ಬೆಂಕಿ ಹಚ್ಚಿಕೊಂಡು ಸ್ಟಾಫ್ನರ್ಸ್ ಆತ್ಮಹತ್ಯೆ! | ಜನತಾ ನ್ಯೂಸ್
ಕಲಬುರಗಿ : ಗಂಡನ ಕಿರುಕುಳ ಸಹಿಸಲಾಗದೇ ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಶಿವಾಜಿನಗರದಲ್ಲಿ ನಡೆದಿದೆ.
ಇಂದಿರಾ (38) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಸೇಡಂನಲ್ಲಿ ಆಯುಷ್ ಇಲಾಖೆಯ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ರಾಯಚೂರು ಮೂಲದ ಇಂದಿರಾ ಅವರನ್ನು 2002ರಲ್ಲಿ ಸಂಜೀವ್ ರೆಡ್ಡಿ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಸಿವಿಲ್ ಕಾಂಟ್ರ್ಯಾಕ್ಟರ್ ಆಗಿದ್ದ ಸಂಜೀವ್ ರೆಡ್ಡಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದರು. ಆದ್ದರಿಂದಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸಂಬಂಧ ಶಿವಾಜಿನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
RELATED TOPICS:
English summary :Kalburgi