ಐಎಫ್ಎಸ್ ಪತಿಯ ವಿರುದ್ಧ ಆಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ಐಪಿಎಸ್ ಪತ್ನಿ ! | ಜನತಾ ನ್ಯೂಸ್
ಬೆಂಗಳೂರು : ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ನಡುವೆ ಕಾನೂನು ಸಮರ ಮುಂದುವರೆದಿದೆ. ಬೆಂಗಳೂರಿನಲ್ಲಿ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿರುವ ವರ್ತಿಕಾ ಕಟಿಯಾರ್, ತನ್ನ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗಕ್ಕೆ ವರ್ತಿಕಾ ಪತಿ ದೂರು ನೀಡಿದ್ದಾರೆ.
ವರ್ಟಿಕಾ ಕಟಿಯಾರ್ ನಗರದ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ಮಗನನ್ನು ನೋಡಲು ಬಿಡುತ್ತಿಲ್ಲವೆಂದು ಭಾರತೀಯ ವಿದೇಶಾಂಗ ಇಲಾಖೆ(ಐಎಫ್ಎಸ್) ಅಧಿಕಾರಿ ನಿತಿನ್ ಸುಭಾಶ್ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.
ವರ್ಟಿಕಾ ಕಟಿಯಾರ್ ಈ ಹಿಂದೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿತಿನ್ ಹಾಗೂ ಕಟಿಯಾರ್ ದಾಂಪತ್ಯದಲ್ಲಿ ಬಿರುಕು ಕಂಡ ಹಿನ್ನಲೆ 2020ರಲ್ಲಿ ವಿಚ್ಚೇದನ ಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಚ್ಚೇದನದ ಅರ್ಜಿ ವಿಚಾರಣಾ ಹಂತದಲ್ಲಿದೆ.
ಕಳೆದ ಫೆಬ್ರವರಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪಿಸಿ ವರ್ತಿಕಾ ಕಟಿಯಾರ್, ತಮ್ಮ ಪತಿ ನಿತಿನ್ ಸುಭಾಶ್ ಹಾಗೂ ಕುಟುಂಬಸ್ಥರು ಸೇರಿದಂತೆ 7 ಮಂದಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದೆಹಲಿ ಪೊಲೀಸರಿಗೆ ಹಸ್ತಾಂತರವಾಗಿತ್ತು. ಈಗ ಮತ್ತೆ ಕಳೆದ ಮೇ 28ರಂದು ವಾಟ್ಸಾಪ್ ಗ್ರೂಪ್ ಕಾಲ್ನಲ್ಲಿ ಆಯಸಿಡ್ ಹಾಕುವುದಾಗಿ ಆಯಸಿಡ್ ದಾಳಿ, ಜೀವ ಬೆದರಿಕೆ, ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರ್ತಿಕಾ ಗಂಡನ ಮೇಲೆ ಗಂಭೀರ ಆರೋಪ ಮಾಡಿದ್ದರು.
ನಿತಿನ್ ತಾಯಿ ಮಗನೊಂದಿಗೆ ವಾಟ್ಸಪ್ ಕಾಲ್ ನಲ್ಲಿರುವಾಗ ಆಸಿಡ್ ಹಾಕುತ್ತೇನೆ ಅಥವಾ ಬೇರೆಯವರಿಂದ ಆಸಿಡ್ ಹಾಕಿಸೊದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಜೊತೆಗೆ ಮೇ 29 ರಂದು ಲಾಕ್ಡೌನ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಬೆಂಗಳೂರಿನ ಕಚೇರಿಗೆ ಹಲ್ಲೆಗೆ ಸಂಚು ಆರೋಪಿಸಿದ್ದಾರೆಂದು ಆರೋಪಿಸಿ ವರ್ಟಿಕಾ ದೂರು ವಿಧಾನಸೌದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.