ಚುನಾವಣೆಯಲ್ಲಿ ಸೋತು ಭಿಕ್ಷೆ ಬೇಡಿ ಮಂತ್ರಿಯಾದವರು ಯಡಿಯೂರಪ್ಪ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಿಡಿ | ಜನತಾ ನ್ಯೂಸ್
ಬೆಂಗಳೂರು : ಕೆಲವರಿಗೆ ತಮ್ಮ ಪಕ್ಕದ ಕ್ಷೇತ್ರವನ್ನು ಗೆಲ್ಲಿಸುವ ತಾಕತ್ತಿಲ್ಲ. ಆದರೂ ಕೆಲವರು ಯಡಿಯೂರಪ್ಪನವರ ಬಗ್ಗೆ ಮಾತನಾಡುತ್ತಾರೆ. ಯತ್ನಾಳ್ ನಂತವರು ಹುಚ್ಚುಚ್ಚುರಾಗಿ ಮಾತಾಡುತ್ತಾರೆ. ಚುನಾವಣೆಯಲ್ಲಿ ಸೋತವರು ಭಿಕ್ಷೆ ಬೇಡಿ ಮಂತ್ರಿಯಾಗಿದ್ದಾರೆ. ಅವರು ಯಡಿಯೂರಪ್ಪ ನವರ ನಾಯಕತ್ವದ ಬಗ್ಗೆ ಮಾತನಾಡುತ್ತಾರೆ ಎಂದು ರೇಣುಕಾಚಾರ್ಯ ಅವರು ಕಿಡಿ ಕಾರಿದರು.
ಕೊವೀಡ್ ಸಂದರ್ಭದಲ್ಲಿ ಕೆಲವರು ದೆಹಲಿಗೆ ಹೋಗಿ ಏನೇನೋ ಮಾಡೋದು ಸರಿಯಲ್ಲ.. ಯಡಿಯೂರಪ್ಪ ನವರು ಇಳಿ ವಯಸ್ಸಿನಲ್ಲೂ ಸಮರ್ಥವಾಗಿ ಕೊವೀಡ್ ತಡೆಗೆ ಶ್ರಮಿಸುತ್ತಿದ್ದಾರೆ. ಯಡಿಯೂರಪ್ಪನವರಿಗೆ ಯಾರೋ ಒಂದಿಬ್ಬರು ಅಪಪ್ರಚಾರ ಮಾಡುವ ಕೆಲಸ ಮಾಡ್ತಿದ್ದಾರೆ. ನಾನು ಇದರ ಬಗ್ಗೆ ಅವರ ಜೊತೆ ಚರ್ಚೆ ಮಾಡ್ತೇನೆ. ಬಿಎಸ್ವೈ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ನಾವು ಯಡಿಯೂರಪ್ಪ ಜೊತಗಿದ್ದೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಕೆಲವರಿಗೆ ಪಕ್ಕದ ಕ್ಷೇತ್ರ ಗೆಲ್ಲಿಸುವ ತಾಕತ್ತು ಇಲ್ಲ. ಆದರೂ ಕೆಲವರು ಅವರ ಬಗ್ಗೆ ಮಾತನಾಡ್ತಾರೆ. ಯತ್ನಾಳ್ನಂತವರು ಹುಚ್ಚುಚ್ಚರಾಗಿ ಮಾತಾಡ್ತಾರೆ. ಇದನ್ನು ಪ್ರತಿಪಕ್ಷಗಳು ಸದುಪಯೋಗ ಮಾಡಿಕೊಳ್ತಾರೆ. ಚುನಾವಣೆಯಲ್ಲಿ ಸೋತವರು ಬೆಗ್ ಮಾಡಿ ಮಂತ್ರಿ ಆಗಿದ್ದಾರೆ.. ಅವರು ಯಡಿಯೂರಪ್ಪನವರ ನಾಯಕತ್ವದ ಬಗ್ಗೆ ಮಾತನಾಡ್ತಾರೆ.
ಸಿಎಂ ಯಡಿಯೂರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ನಾನು ನನ್ನ ಆತ್ಮಸಾಕ್ಷಿಯಾಗಿ ಎದೆ ಮುಟ್ಟಿಕೊಂಡು ಹೇಳುತ್ತೇನೆ. ನನ್ನ ಬಳಿ ಸಹಿ ಸಂಗ್ರಹ ಮಾಡಿರುವ 65ಕ್ಕೂ ಹೆಚ್ಚು ಶಾಸಕರ ಪತ್ರ ಇದೆ. ಯಡಿಯೂರಪ್ಪರೇ ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಬರೆದಿರುವ ಪತ್ರ. ಅದನ್ನು ಕೋವಿಡ್ ಮುಗಿದ ಕೂಡಲೇ ದೆಹಲಿಗೆ ಹೋಗಿ ಹೈಕಮಾಂಡ್ ಗೆ ತಲುಪಿಸುತ್ತೇವೆ. ಪತ್ರದಲ್ಲಿ ಯಡಿಯೂರಪ್ಪ ವಿರುದ್ಧ ಮಾತಾನಾಡಿರುವವರ ವಿರುದ್ದವೂ ಕ್ರಮ ಆಗಬೇಕು ಎಂಬುದಿದೆ ಎಂದ ರೇಣುಕಾಚಾರ್ಯ ಹೇಳಿದರು.