Thu,Apr25,2024
ಕನ್ನಡ / English

ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ! | ಜನತಾ ನ್ಯೂಸ್

10 Jun 2021
1552

ಕಾರವಾರ : ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ರಾಷ್ಟ್ರೀಯತೆಯನ್ನು ಹೊಂದಿರುವ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ.

ಪಾಕಿಸ್ತಾನದ ಖತೀಜಾ ಮೆಹರಿನ್ ಎಂಬಾಕೆಯೇ ಬಂಧಿತ ಮಹಿಳೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 8 ವರ್ಷದ ಹಿಂದೆ ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್‌ ಎಂಬುವವರನ್ನು ಖತೀಜಾ ದುಬೈನಲ್ಲಿ ವಿವಾಹವಾಗಿದ್ದಳು.

ದುಬೈನಲ್ಲಿ ಭಟ್ಕಳದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತನ ಜತೆ ವಿವಾಹವಾಗಿದ್ದ ಈಕೆ ಯಾವುದೇ ದಾಖಲೆ ನೀಡದೇ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಳು. 2014ರಲ್ಲಿ 3 ತಿಂಗಳ ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಈಕೆ 2015ರಲ್ಲಿ ಕಳ್ಳ ಮಾರ್ಗ ಅನುಸರಿಸಿ ಭಾರತ ಪ್ರವೇಶಿದ್ದಳು.

ಭಟ್ಕಳದಲ್ಲಿ ಈಕೆಯು ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದುಕೊಂಡಿದ್ದಾಳೆ. ಪೊಲೀಸರು ಆಕೆಯನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಇವೆಲ್ಲ ದಾಖಲೆಗಳನ್ನು ಕೂಡ ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

ಮಹಿಳೆಯು ಅಕ್ರಮವಾಗಿ ನೆಲೆಸಿರುವ ಖಚಿತ ಮಾಹಿತಿ ಲಭಿಸಿದ ಬಳಿಕ ಕೆಲವು ತಿಂಗಳಿನಿಂದ ಸ್ಥಳೀಯ ಪೊಲೀಸರು ವಿವಿಧ ತನಿಖಾ ಸಂಸ್ಥೆಗಳ ಸಹಕಾರದಿಂದ ತನಿಖೆ ಕೈಗೊಂಡಿದ್ದರು. ಕೊನೆಗೂ ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆಕೆಯ ವಿರುದ್ಧ ವಿದೇಶಿಗರ ನೋಂದಣಿ ಕಾಯ್ದೆ ಉಲ್ಲಂಘನೆ ಮತ್ತು ಇತರ ಭಾರತೀಯ ದಂಡ ಸಂಹಿತೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಕುರಿತು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸ್ ಇಲಾಖೆ ಅಕ್ರಮವಾಗಿ ನೆಲೆಸಿರುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮನೆಯನ್ನು ಶೋಧ ಮಾಡಿದಾಗ ಈಕೆಯು ಇರುವುದು ಖಚಿತವಾಗಿದ್ದು ಆಕೆಯನ್ನು ಬಂಧಿಸಿ ವಿದೇಶಿಯರ ಕಾಯ್ದೆ ಕಲಂ 14, 14 (ಎ)(ಬಿ), ಹಾಗೂ ಐ.ಪಿ.ಸಿ. ಕಲಂ 468 ಹಾಗೂ 471ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದರಿನಾಥ, ಭಟ್ಕಳ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ ಕೆ.ಯು, ಸಿ.ಪಿ.ಐ ದಿವಾಕರ ಅವರ ಮಾರ್ಗದರ್ಶನದಂತೆ ಇನ್‌ಸ್ಪೆಕ್ಟರ್ ಬಿ.ಸುಮಾ, ಸಿಬ್ಬಂದಿ ನಾರಾಯಣ ನಾಯ್ಕ, ಮುಗ್ದುಂ ಪತ್ತೆಖಾನ್, ಲೋಕಪ್ಪ ಪತ್ತಿ, ಹೀನಾ.ಎಫ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

RELATED TOPICS:
English summary :Uttara kannada

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...