ಕೊರೊನಾ ಸೋಂಕಿತರಿಗೆ ಬೆಡ್ ಕಾಯ್ದಿರಿಸುವ ಹೊಸ ವ್ಯವಸ್ಥೆಗೆ ಚಾಲನೆ | ಜನತಾ ನ್ಯೂಸ್
ಬೆಂಗಳೂರು : ಕೊರೊನಾ ಸೋಂಕಿತರು ಸರತಿ ಸಾಲಿನಲ್ಲಿ ಬೆಡ್ ಕಾಯ್ದಿರುವ ನೂತನ ವ್ಯವಸ್ಥೆಯನ್ನು ಸಚಿವ ಅರವಿಂದ ಲಿಂಬಾವಳಿ ಇಂದು ಲೋಕಾರ್ಪಣೆಗೊಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ಹೊಸ ವ್ಯವಸ್ಥೆ ಜಾರಿಗೆ ಬಂದಿದ್ದು ,ಮುಂದಿನ ಕೆಲವೇ ದಿನಗಳಲ್ಲಿ ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ಹೊಸ ವ್ಯವಸ್ಥೆ ಜಾರಿಗೆ ಬಂದಿದ್ದು ,ಮುಂದಿನ ಕೆಲವೇ ದಿನಗಳಲ್ಲಿ ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಈ ಹೊಸ ತಂತ್ರಾಂಶ ಸಿದ್ಧಪಡಿಸುವಲ್ಲಿ ನೆರವಾದ ನಂದನ್ ನಿಲೇಕಣಿ, ಐ-ಸ್ಪಿರಿಟ್ ಮತ್ತು ಫ್ರಾಕ್ಟಲ್ ಸಂಸ್ಥೆಗಳಿಗೆ ಹಾಗೂ ಸ್ವಯಂ ಮುಂದೆ ಬಂದ ಅನೇಕ ಐಟಿ ಪರಿಣಿತರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಹೊಸ ಸರತಿ ಸಾಲಿನ ವ್ಯವಸ್ಥೆಯು ಹಾಸಿಗೆ ಕಾಯ್ದಿರಿಸುವಿಕೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ನೆರವಾಗುತ್ತದೆ, ಇದು ಸಂಯೋಜಿತ ವ್ಯವಸ್ಥೆಯನ್ನು ಹೊಂದಿದ್ದು ಆಸ್ಪತ್ರೆ ಪ್ರವೇಶ ಪಡೆಯುವ ಎಲ್ಲ ರೋಗಿಗಳಿಗೆ ಸುಲಭವಾಗಿ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.
ಆಸ್ಪತ್ರೆಯ ಹಾಸಿಗೆ ಹಂಚಿಕೆ ಫಿಸಿಕಲ್ ಟ್ರಯಾಜಿಂಗ್ ಆಧರಿಸಿ ಮಾಡಲಾಗುವುದು,ಕ್ಯೂಯಿಂಗ್ ವ್ಯವಸ್ಥೆಯಿಂದ ಆಸ್ಪತ್ರೆ ಪ್ರವೇಶ ಪಡೆಯಲು ಬಯಸುವ ಎಲ್ಲಾ ರೋಗಿಗಳ ಟ್ರಯಾಜ್ ವಿವರಗಳನ್ನು ಎಲೆಕ್ಟ್ರಾನಿಕ್ ಪದ್ಧತಿ ಮೂಲಕ ದಾಖಲಿಸಲಾಗುತ್ತದೆ ಎಂದರು.
ಕ್ಲಿನಿಕಲ್ ಪರಿಸ್ಥಿತಿಗಳ ಆಧಾರದ ಮೇಲೆ ಸೊಂಕಿತರಿಗೆ ಆಸ್ಪತ್ರೆ / ಸಿಸಿಸಿ ಹಾಸಿಗೆ ಯನ್ನು ಶಿಫಾರಸು ಮಾಡಲಾಗುವುದು,ಈ ರೋಗಿಗಳಿಗೆ ನಿರ್ದಿಷ್ಟ ಹಾಸಿಗೆ ಮತ್ತು ವಲಯದ ಪ್ರಕಾರ ಕ್ಯೂ ಸಂಖ್ಯೆಯನ್ನು ನಿಗದಿ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.
ಚಿಕಿತ್ಸೆಯ ಸಮಯದ ಆಧಾರದ ಮೇಲೆ ಕ್ಯೂ ಸಂಖ್ಯೆಯನ್ನು ಸ್ವಯಂಚಾಲಿತವಾಗಿ ನಿಯೋಜಿಸುವುದು. ನಿರ್ದಿಷ್ಟ ಹಾಸಿಗೆ ಪ್ರಕಾರ ಮತ್ತು ವಲಯಕ್ಕೆ ಕ್ಯೂ ಸಂಖ್ಯೆಯನ್ನು ನಿಗದಿ ಪಡಿಸಲಾಗಿದೆ ಇದರಿಂದ ಅನಗತ್ಯ ಗೊಂದಲ ನಿವಾರಣೆಯಾಗುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, BBMP ವಾರ್ ರೂಮ್ ನಿರ್ವಹಣೆಯ ಹೊಣೆಹೊತ್ತಿರುವ ತುಷಾರ್ ಗಿರಿನಾಥ್, ವಿ ಪೊನ್ನುರಾಜ್, ಕುಮಾರ್ ಪುಷ್ಕರ್, ಬಿಸ್ವಜಿತ್ ಸಿಂಗ್, ವಿಶೇಷ ಆಯುಕ್ತ ರಣದೀಪ್ ಹಾಗು ಡಾ. ಭಾಸ್ಕರ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.