ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ಅನ್ ಲಾಕ್ ಆಗುತ್ತಿದೆಯೆಂದರೆ ಕೊರೋನಾ ಸೋಂಕು ಸಂಪೂರ್ಣ ಹೋಗಿದೆ ಎಂದರ್ಥವಲ್ಲ, ಜನ ಎಚ್ಚರಿಕೆಯಿಂದ ಇರಬೇಕು. 3-4 ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಸಿಗುತ್ತದೆ. ಅಲ್ಲಿಯವರೆಗೂ ಸರ್ಕಾರದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸುಧಾಕರ್ ಹೇಳಿದರು.
ಸೋಮವಾರದಿಂದ ಕರ್ನಾಟಕ ಅರ್ಧಪಾಲು ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದರೂ ಜನ ಇಂದಿನಿಂದಲೇ ಓಡಾಡಲು ಆರಂಭಿಸಿದ್ದಾರೆ. ಲಾಕ್ ಡೌನ್ ಸಡಿಲಿಕೆಯಾಗಿದೆಯೆಂದರೆ ಜನರು ಬೇಕಾಬಿಟ್ಟಿ ಓಡಾಡಬಹುದು ಎಂದರ್ಥವಲ್ಲ. ಇನ್ನಷ್ಟು ಎಚ್ಚರಿಕೆಯಿಂದಿರಬೇಕು ಎಂದರು.
ಶೇ.10ಕ್ಕಿಂತ ಹೆಚ್ಚು ಸೋಂಕು ಇರುವ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. 5% ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು ಎಂದರು.
ಅನ್ ಲಾಕ್ ಮಾಡಿದರೂ ಜನರು ಎಚ್ಚರಿಕೆಯಿಂದ ಇರಬೇಕು. ಎರಡು ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು. ರಾಜ್ಯದಲ್ಲಿ ಕನಿಷ್ಠ 70% ಡೋಸ್ ಸಂಪೂರ್ಣವಾದ ಮೇಲೆ ನಾವು ಮೊದಲಿನಂತೆ ಆರಾಮವಾಗಬಹುದು. ಲಸಿಕೆ ಹಾಕಿಸಿಕೊಳ್ಳೋವರೆಗೂ ಯಾರು ಮೈ ಮರೆಯುವಂತಿಲ್ಲ ಎಂದು ಅವರು ಹೇಳಿದರು.
ನಗರ ಭಾಗದಲ್ಲಿ ಜನ ಅನಗತ್ಯವಾಗಿ ಓಡಾಡಬಾರದು. ಬೆಂಗಳೂರು ನೋಡಿದರೆ ನನಗೂ ಭಯವಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆಪಾಯ ಖಚಿತ. ಜನ ಎಚ್ಚರಿಕೆಯಿಂದ ಇರಬೇಕು. 3-4 ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಸಿಗುತ್ತದೆ. ಅಲ್ಲಿಯವರೆಗೂ ಸರ್ಕಾರದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸುಧಾಕರ್ ಹೇಳಿದರು.