ಜಾರಕಿಹೊಳಿ ಸಿಡಿ ಕೇಸ್: ತನಿಖಾಧಿಕಾರಿಗಳ ಮುಂದೆ ನರೇಶ್ಗೌಡ, ಶ್ರವಣ್ ಹಾಜರ್ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ವೈರಲ್ ಆಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಈ ಕೇಸ್ನ ಸೂತ್ರಧಾರಿಗಳೆಂದೇ ಹೇಳಲಾದ ಬಿ.ಎಂ.ನರೇಶ್ ಗೌಡ ಮತ್ತು ಶ್ರವಣ್ ಇವರಿಬ್ಬರು ಇಂದು ಎಸ್ಐಟಿ ಮುಂದೆ ಹಾಜರಾಗಿದ್ದಾರೆ.
ಈ ಇಬ್ಬರ ಮೇಲೆ ಸದಾಶಿವನಗರ ಠಾಣೆಯಲ್ಲಿ ಷಡ್ಯಂತ್ರ, ಬ್ಲ್ಯಾಕ್ಮೇಲ್ ಕೇಸ್ ದಾಖಲಾಗಿತ್ತು. ಇದೀಗ ಕೋರ್ಟ್ ಆದೇಶದಂತೆ ವಿಚಾರಣೆಗೆ ಹಾಜರಾಗಿದ್ದಾರೆ. ಷಡ್ಯಂತ್ರ, ಬ್ಲ್ಯಾಕ್ಮೇಲ್ ಆರೋಪ ಪ್ರಕರಣದಲ್ಲಿ ಇಬ್ಬರು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಆರೋಪಿಗಳು ಎಸ್ಐಟಿ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ಮುಂದೆ ವಕೀಲರೊಂದಿಗೆ ಹಾಜರಾಗಿದ್ದಾರೆ. ಎಸ್ಐಟಿ ಕೂಡ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದೆ. ನೀರೀಕ್ಷಣಾ ಜಾಮೀನು ಪಡೆದು ವಿಚಾರಣೆಗೆ ಹಾಜರಾದರೂ ಆರೋಪಿಗಳಿಗೆ ಆತಂಕ ಶುರುವಾಗಿದೆ. ಯಾಕೆಂದರೆ ಕೋರ್ಟ್ ನೀಡಿದ ಆದೇಶ ಪ್ರತಿಯಲ್ಲಿ ಅಗತ್ಯವಿದ್ದರೆ ತನಿಖಾ ತಂಡಕ್ಕೆ ಆರೋಪಿಗಳನ್ನು ಬಂಧಿಸಲು ಅವಕಾಶ ನೀಡಲಾಗಿದೆ.