Thu,Apr25,2024
ಕನ್ನಡ / English

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂಸ್

13 Jun 2021
1030

ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು ಜಿಎಸ್‌ಟಿಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ ಜಿಎಸ್ ಟಿ ಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. ಜಿಎಸ್ ಟಿಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ ಎಂದಿದ್ದಾರೆ.

ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಕಿಡಿಕಾರಿದ್ದಾರೆ.

ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.

ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ ಎಂದು ಆಗ್ರಹಿಸಿದ್ದಾರೆ.

ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ₹60–65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ₹30 ಮೀರಬಾರದು. ಆಗ ಪೆಟ್ರೋಲ್‌ ₹65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ.

ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು ಜಿಎಸ್ ಟಿಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು ಜೆಡಿಎಸ್ ಒತ್ತಾಯ. ಜತೆಗೆ ಪೆಟ್ರೋಲನ್ನು ಜಿಎಸ್ ಟಿ ಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :HD Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...