ಸಂಚಾರಿ ವಿಜಯ್ ಇನ್ನೂ ಜೀವಂತ: ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು | ಜನತಾ ನ್ಯೂಸ್
ಬೆಂಗಳೂರು : ಸ್ಯಾಂಡಲ್ವುಡ್ ನಟ ಸಂಚಾರಿ ವಿಜಯ್ ಅವರ ಅಗಲಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಕಿಚ್ಚ ಸುದೀಪ್, ವಸಿಷ್ಠ ಸಿಂಹ ಸೇರಿದಂತೆ ಹಲವಾರು ಮಂದಿ ಸಂತಾಪ ಸೂಚಿಸಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯರು ಸಂಚಾರಿ ವಿಜಯ್ ಅವರು ಇನ್ನೂ ಜೀವಂತವಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಸಂಚಾರಿ ವಿಜಯ್ ಅವರ ಬಗ್ಗೆ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಿಯೇ ನಾನೇ ಬಂದು ಹೇಳುತ್ತಿದ್ದೇನೆ. ಇನ್ನೂ ಅವರು ಜೀವಂತವಾಗಿದ್ದಾರೆ. ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.
ಇದರ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ಆಸ್ಪತ್ರೆ ಅಧಿಕೃತವಾಗಿ ಘೋಷಿಸಿಲ್ಲ. ಅಪಘಾತದಿಂದಾಗಿ ಅವರ ಮೆದುಳು ನಿಷ್ಕ್ರಿಯಗೊಂಡಿರುವುದು ನಿಜ. ಆದರೆ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅವರ ಇತರ ಅಂಗಗಳು ಕಾರ್ಯನಿರ್ವಹಿಸುತ್ತಿವೆ. ಮೆದುಳು ನಿಷ್ಕ್ರಿಯ ಎಂದಾಕ್ಷಣ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಹೇಳಲು ಆಗಲ್ಲ. ಹೃದಯ ಬಡಿತ ನಿಂತಾಗ ಮಾತ್ರ ಮೃತ ಎಂದು ಹೇಳಬಹುದು ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಅರುಣ್ ನಾಯ್ಕ್ ತಿಳಿಸಿದ್ದಾರೆ.
ಬ್ರೈನ್ ಡೆಡ್ ಆದ ಮೇಲೂ ಮನುಷ್ಯರು ಹಲವಾರು ಗಂಟೆಗಳ ಕಾಲ ಇನ್ನೂ ಜೀವಂತವಾಗಿರುತ್ತಾರೆ. ಹೃದಯದ ಬಡಿತ ನಿಂತ ಮೇಲೆ ಮರಣ ಎಂದು ಘೋಷಿಸಲಾಗುತ್ತದೆ. ಹೀಗಾಗಿಯೇ ಮೆದುಳು ನಿಷ್ಕ್ರಿಯಗೊಂಡಿರುವ ಸಂಚಾರಿ ವಿಜಯ್ ಅವರು ಇನ್ನೂ ಜೀವಂತವಾಗಿದ್ದಾರೆ. ಇನ್ನು ಅವರಿಗೆ ಬ್ರೈನ್ ಡೆಡ್ ಆಗಿಲ್ಲ. ಒಮ್ಮೆ ಬ್ರೈನ್ ಡೆಡ್ ಆದ ನಂತರ ಮತ್ತೆ ಅವರು ಮೊದಲಿನಂತೆ ಆಗುವುದಿಲ್ಲ. ಇಂತಹ ಸ್ಥಿತಿಯಲ್ಲಿ ಮನೆಯವರ ನಿರ್ಧಾರದಂತೆ ಅಂಗಾಂಗ ದಾನದ ಪ್ರಕ್ರಿಯೆಗೆ ಮುಂದಾಗುತ್ತೇವೆ ಎಂದು ವೈದ್ಯರು ವಿವರಿಸಿದ್ದಾರೆ.