ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ | ಜನತಾ ನ್ಯೂಸ್
ಬೆಂಗಳೂರು : ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 6,000 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲಾ ಸಿಬ್ಬಂದಿಗೆ ಲಸಿಕೆ ವಿತರಿಸಲಾಗುವುದು.
ಹೀಗಾಗಿ ಜಿಲ್ಲಾ ಉಪನಿರ್ದೇಶಕರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳ ಗಮನಕ್ಕೆ ತರುವಂತೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಸೂಚನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ತಿಳಿಸಿದೆ.
ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂನ್ 15ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮಕ್ಕಳ ದಾಖಲಾತಿ ಆರಂಭಿಸಬೇಕು. ಜುಲೈ 30ರೊಳಗೆ ಮಕ್ಕಳ ದಾಖಲಾತಿ ಮುಗಿಸಬೇಕು ಹಾಗೂ ಜುಲೈ 1ರಿಂದ ಶಾಲೆಗಳನ್ನು ತೆರೆಯುವಂತೆ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದರು.
ಶಿಕ್ಷಕರು ಅನ್ಯಕಾರಣ ನೀಡುವಂತಿಲ್ಲ. ಈಗಾಗಲೇ ಒಂದು ಶೈಕ್ಷಣಿಕ ವರ್ಷ ವಿಳಂಬವಾಗಿದೆ. ಕೋವಿಡ್ ವೇಳೆ ವೈದ್ಯರು, ಕಾರ್ಮಿಕರು ಕೂಡ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ಶಿಕ್ಷಕರು ಶಾಲೆಗಳಿಗೆ ಹಾಜರಾಗಬೇಕು. ಒಂದು ವೇಳೆ ಜುಲೈ 1ರಿಂದ ಕೋವಿಡ್ ಸಮಸ್ಯೆಯಾಗಿ ಶಾಲೆಗಳಲ್ಲಿ ತರಗತಿ ಸಾಧ್ಯವಾಗಿಲ್ಲ ಎಂದರೆ ಆನ್ ಲೈನ್ ತರಗತಿಗಳ ಮೂಲಕವಾದರೂ ಪಾಠ ಮಾಡಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.