ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಒಂದು ಲಕ್ಷ ರೂ. ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಸಾಧ್ಯವಿದೆ. ಕೇಂದ್ರಕ್ಕೆ ಮನವರಿಕೆ ಮಾಡಿ ಈ ಅವಕಾಶ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಅವರು ಆಗ್ರಹಿಸಿದ್ದಾರೆ. ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟ ಪಡ್ತಾ ಇದ್ದಾರೆ.
ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ. ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ರಾಜ್ಯ ಸರ್ಕಾರ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.