ಉದ್ಯಮಿಯಿಂದ ಲಂಚ ಪಡೆದಿದ್ದ ಎಎಸ್ಐ, ದಾಳಿಯಲ್ಲಿ ಎಎಸ್ಐ ದಯಾನಂದಸ್ವಾಮಿ 6 ಕೋಟಿ ಮೌಲ್ಯದ ಮನೆ ಪತ್ತೆ! | ಜನತಾ ನ್ಯೂಸ್
ಬೆಂಗಳೂರು : ಲಂಚ ಪಡೆದ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಎಸ್ಐ ದಯಾನಂದಸ್ವಾಮಿ ಅಮಾನತುಗೊಂಡಿದ್ದರು.
ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ಬೆಂಗಳೂರು ನಗರ ಘಟಕದ ಎಸಿಬಿ ಅಧಿಕಾರಿಗಳು ದನಾಯಂದ್ ಸ್ವಾಮಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆದೇಶ ಹಿನ್ನಲೆಯಲ್ಲಿ 15 ಅಧಿಕಾರಿಗಳ ತಂಡದಿಂದ ಮನೆಯ ಮೇಲೆ ದಾಳಿ ನಡೆಸಲಾಗಿದೆ.
ದಯಾನಂದ್ 2020ರಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಯಿಂದ ನಿಂದ ಎ.ಎಸ್.ಐ ಆಗಿ ಮುಂಬಡ್ತಿ ಪಡೆದಿದ್ದ. ಹೆಡ್ ಕಾನ್ಸ್ಟೇಬಲ್ ಆದಾಗಿನಿಂದಲೂ ಡಿಸಿಪಿ ಕಚೇರಿಯಲ್ಲಿ SB ಯಾಗಿ ಕೆಲಸ ನಿರ್ವಹಿಸಿದ್ದ. ಕಳೆದ ಆರು ವರ್ಷಗಳಿಂದ ಈಶಾನ್ಯ ವಿಭಾಗದ ಡಿಸಿಪಿ ಕಚೇರಿಯ SB ಸ್ಪೆಷಲ್ ಬ್ರಾಂಚ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ. ಆ ವಿಭಾಗಕ್ಕೆ ಡಿಸಿಪಿಯಾಗಿ ಬರುವ ಐಪಿಎಸ್ ಅಧಿಕಾರಿಗಳ ಅಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ. ಆತನಿಗೆ ತಿಂಗಳಿಗೆ ಸರ್ಕಾರದಿಂದ 55 ಸಾವಿರ ರೂಪಾಯಿ ಸಂಬಳ ಬರುತ್ತಿತ್ತು. ಯಲಹಂಕ ನ್ಯೂ ಟೌನ್ನಲ್ಲಿ 35/40 ಅಳತೆಯ ಮೂರು ಅಂತಸ್ತಿನ ಡುಪ್ಲೆಕ್ಸ್ ಮನೆ ಕಟ್ಟಿಸಿಕೊಂಡಿದ್ದ. ಮನೆ ನಿರ್ಮಾಣಕ್ಕೆ ಸುಮಾರು 5ರಿಂದ ಆರು ಕೋಟಿ ರೂಪಾಯಿ ಖರ್ಚು ಮಾಡಿದ್ದ ಎನ್ನಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹತ್ತು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ದಯಾನಂದ್ ಐದು ಲಕ್ಷ ರೂ. ಲಂಚವನ್ನು ಸ್ವೀಕರಿಸಿದ್ದರು. ಡಿಸಿಪಿ ಹೆಸರಿನಲ್ಲಿ ಲಂಚ ಕೇಳಿದ್ದ ದಯಾನಂದ್ ಸ್ವೀಕರಿಸುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದವು. ಈ ಕುರಿತು ಉದ್ಯಮಿ ದೂರು ನೀಡಿದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ದಯಾನಂದ ಸ್ವಾಮಿಯನ್ನು ಅಮಾನತು ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಎಸಿಬಿ ಬೆಂಗಳೂರು ಘಟಕಕ್ಕೆ ವರ್ಗಾವಣೆ ಮಾಡಲಾಗಿತ್ತು.