Fri,Apr26,2024
ಕನ್ನಡ / English

ಬಿಜೆಪಿಗೆ ಅಧಿಕಾರ ಕೊಟ್ಟ ಜನರಿಗೆ ವೈರಾಗ್ಯ ಬಂದಿದೆ | ಜನತಾ ನ್ಯೂಸ್

16 Jun 2021
2177

ಬೆಂಗಳೂರು : ಬಿಜೆಪಿ ಬಂದಾಗಲೆಲ್ಲ ಈ ಸಮಸ್ಯೆ ಉದ್ಭವಿಸುತ್ತಿದೆ. ನಮ್ಮಲ್ಲಿಯೂ ಈ ಹಿಂದೆ ಇಂತಹ ಪರಿಸ್ಥಿತಿ ಇತ್ತು. ಅದರಿಂದ ಪಾಠ ಕಲಿತು ನಾವು ತಪ್ಪು ತಿದ್ದುಕೊಂಡಿದ್ದೇವೆ ಎಂದರು.

ಜಯನಗರದಲ್ಲಿ ಆಹಾರದ ಕಿಟ್ ವಿತರಣೆ ಕಾರ್ಯಕ್ರಮ ನಂತರ ಬಿಜೆಪಿ ಆಂತರಿಕ ಕಚ್ಚಾಟದ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಪಕ್ಷದ ಗೊಂದಲ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತದೆ. ಜನರಿಗೆ ಇದು ಮಾರಕ. ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ವಿರುದ್ಧ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಬಲಿಷ್ಠ ನಾಯಕ ಅಂದುಕೊಂಡಿದ್ದೆ. ಆದರೆ ಆಡಳಿತ ವಿಚಾರದಲ್ಲಿ ಅವರು ಬಹಳ ದುರ್ಬಲರಾಗಿದ್ದಾರೆ. ಬಿಜೆಪಿಗೆ ಯಾಕಾದರೂ ಅಧಿಕಾರ ಕೊಟ್ಟೆವು ಎಂದು ಜನರಿಗೆ ವೈರಾಗ್ಯ ಬಂದಿದೆ ಎಂದರು.

ಬಾಂಬೆ ಟೀಮ್​ನಿಂದ ಗೊಂದಲವಾಗುತ್ತಿದೆ ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ನಾನು ಈ ಹಿಂದೆಯೇ ವಿಧಾನಸಭೆಯಲ್ಲೇ ಭವಿಷ್ಯ ನುಡಿದಿದ್ದೆ. ಈಶ್ವರಪ್ಪ ಅವರ ಈ ಟೀಕೆಗೆ ಬಿ.ಸಿ. ಪಾಟೀಲ್ ಈಗ ಉತ್ತರ ಕೊಟ್ಟಿದ್ದಾರೆ ಎಂದು ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದ ಬಗ್ಗೆ ಮಾತನಾಡಿದರು.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಾಡಿದ 100 ನಾಟೌಟ್ ಪ್ರತಿಭಟನೆ ಕೇವಲ ಪಕ್ಷದ ಕಾರ್ಯಕ್ರಮ ಅಲ್ಲ. ಅದು ಜನರ ಆಕ್ರೋಶದ ಪ್ರತಿಧ್ವನಿ. ಈ ವರ್ಷ 50 ಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಅಮೆರಿಕದಲ್ಲೂ ಇಲ್ಲಿಗಿಂತ ಕಡಿಮೆ ಬೆಲೆ ಇದೆ. ಇಲ್ಲಿನ ಬೆಲೆ ಹೆಚ್ಚಳದಿಂದ ದಿನಬಳಕೆ ವಸ್ತುಗಳಿಂದ ಹಿಡಿದು ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಆದರೆ ಜನರ ಆದಾಯದಲ್ಲಿ ಏನಾದರೂ ಏರಿಕೆಯಾಗಿದೆಯಾ..? ಇಲ್ಲವೇ ಇಲ್ಲ. ಆದರೆ ಸರ್ಕಾರದ ಬೊಕ್ಕಸ ಮಾತ್ರ ತುಂಬುತ್ತಿದೆ. ಅದೇ ಕಾರಣಕ್ಕೆ ನಾವು ಈ ಸರ್ಕಾರ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಹೇಳುತ್ತಿದ್ದೇವೆ.

ಯಡಿಯೂರಪ್ಪನವರೆ, ಕೋವಿಡ್ ಚಿಕಿತ್ಸೆಗಾಗಿ ಯಾರೆಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಹಣ ಖರ್ಚು ಮಾಡಿದ್ದಾರೋ, ಅವರಿಗೆ ಆ ಹಣ ಹಿಂದುರಿಗಿಸಿ. ನಿಮ್ಮ ಆಯುಷ್ಮಾನ್ ಭಾರತ ಯೋಜನೆ ಮೂಲಕವಾಗಲಿ ಅಥವಾ ಬೇರೆ ಯಾವುದೇ ಯೋಜನೆಗಳ ಮೂಲಕವಾಗಲಿ ಜನರಿಗೆ ಅವರ ಹಣ ಹಿಂದಿರುಗಿಸಿ ಎಂದು ಕಾಂಗ್ರೆಸ್ ಪರವಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ.

ಜಯನಗರದಲ್ಲಿ ಶಾಸಕಿ ಸೌಮ್ಯಾರೆಡ್ಡಿ ಆಯೋಜಿಸಿದ್ದ ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಂದಿ ಬಿಬಿಎಂಪಿ ಪೌರ ಕಾರ್ಮಿಕರು, 50ಕ್ಕೂ ಹೆಚ್ಚು ಮಂದಿ ಆಶಾ ಕಾರ್ಯಕರ್ತೆಯರು, ನೂರಾರು ಬಡಜನರಿಗೆ ಆಹಾರದ ಕಿಟ್ ಅನ್ನು ಉಭಯ ನಾಯಕರು ವಿತರಿಸಿದರು.

RELATED TOPICS:
English summary :DKShivakumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...