ಸಿದ್ದರಾಮಯ್ಯ ಇಲ್ಲಾಂದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಝೀರೋ, ಇಡೀ ಪಕ್ಷ ಮುಳುಗಿ ಹೋಗುತ್ತೆ: ಎಚ್.ಡಿ.ರೇವಣ್ಣ | ಜನತಾ ನ್ಯೂಸ್
ಹಾಸನ : ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ ಎಂದು ಶಾಸಕ ಹೆಚ್ ಡಿ ರೇವಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ. ಸದ್ಯ ಕಾಂಗ್ರೆಸ್ನನ್ನು ಶೇ.70ಕ್ಕೆ ನಿಲ್ಲಿಸಿರೋದು ಸಿದ್ದರಾಮಯ್ಯ. ಅವರಿಲ್ಲ ಅಂದ್ರೆ ಕಾಂಗ್ರೆಸ್ ಝೀರೋ. ಈ ಬಗ್ಗೆ ನನಗೆ ಹೇಳೋಕೆ ನನಗೇನು ಭಯವಿಲ್ಲ, ನೇರವಾಗಿಯೇ ಹೇಳ್ತೀನಿ ಎಂದರು.
ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಹೆಚ್ ರೇವಣ್ಣ, ದಿನ ಬೆಳಗಾದ್ರೆ ಸೀಮೆಎಣ್ಣೆ ಡಬ್ಬ ಹಿಡ್ಕೊಂಡ್ರೆ ಏನ್ ಮಾಡೋಕೆ ಆಗುತ್ತೆ? ಅದಕ್ಕೆ ಕಾಂಗ್ರೆಸ್ ಮುಳುಗಿ ಹೋಗ್ತಿರೋದು ಎಂದು ಕಾಂಗ್ರೆಸ್ ಹೋರಾಟದ ಬಗ್ಗೆ ವ್ಯಂಗ್ಯವಾಡಿದರು.
ಅಲ್ಲದೆ ನಿತ್ಯ ಪ್ರತಿಭಟನೆ ಮಾಡಿಬಿಟ್ಟರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿಯುತ್ತಾರಾ ಎಂದು ಪ್ರಶ್ನಿಸಿದರು. ಇನ್ನು ದೇವೇಗೌಡರನ್ನ ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದೇ ಕಾಂಗ್ರೆಸ್. ಆ ಶಾಪ ಕಾಂಗ್ರೆಸ್ ಮೇಲಿದೆ. ಕಾಂಗ್ರೆಸ್ ಮುಖಂಡರೇ ಈ ರಾಜ್ಯದ ಮುಖ್ಯಮಂತ್ರಿ ಉಳಿಬೇಕು ಅಂತ ಹೇಳಿದ್ದಾರೆ. ಜೆಡಿಎಸ್ ಮತ್ತು ದೇವೇಗೌಡರನ್ನ ಮುಗಿಸಲು ಹೀಗೆ ಮಾಡಿದ್ದಾರೆ ಎಂದರು.