ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತಾದಿಗಳು | ಜನತಾ ನ್ಯೂಸ್
ಬೆಳ್ತಂಗಡಿ : ಲಾಕ್ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ, ಈಗಾಗಲೇ ಇತರ ಜಿಲ್ಲೆಗಳಿಗೆ ಪ್ರಯಾಣಿಸಲು ಅನುಮತಿ ಇರುವುದರಿಂದ ಭಕ್ತಾದಿಗಳು ಧರ್ಮಸ್ಥಳಕ್ಕೆ ಆಗಮಿಸಿ ನೇತ್ರಾವತಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಧರ್ಮಸ್ಥಳ ಆಡಳಿತ ಮಂಡಳಿ ಕೂಡ ದೇವಸ್ಥಾನಕ್ಕೆ ಲಾಕ್ಡೌನ್ ಮುಗಿಯುವವರೆಗೆ ಪ್ರವೇಶ ಇರುವುದಿಲ್ಲ ಎಂಬ ಪ್ರಕಟಣೆ ಹೊರಡಿಸಿದೆ. ಹೀಗಾಗಿ ದೇವಸ್ಥಾನಕ್ಕೆ ಆಗಮಿಸುತ್ತಿರುವ ಭಕ್ತರು ದೇವಸ್ಥಾನದ ಹೊರಗಿನಿಂದಲೇ ದೇವರ ದರ್ಶನ ಪಡೆದು ತೆರಳುತ್ತಿದ್ದಾರೆ.
ಮಾಸ್ಕ್ ಹಾಗೂ ಸುರಕ್ಷಿತ ಅಂತರದ ವಿಚಾರಗಳೇ ಇಲ್ಲಿ ಕಾಣಿಸುತ್ತಿಲ್ಲ, ಸರಕಾರದ ಕಟ್ಟುನಿಟ್ಟಿನ ಕ್ರಮಗಳು ಕೇವಲ ಹಳ್ಳಿಯ ಜನರಿಗೆ ಮಾತ್ರವೇ ಹೊರಗಿನಿಂದ ಬರುವವರಿಗೆ ಯಾಕೆ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವುಗೊಂಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 21ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಭಕ್ತಾದಿಗಳು ಅವಧಿ ಮುಗಿದ ಬಳಿಕ ಶ್ರೀಕ್ಷಾತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಧ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ.