ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂಸ್
ಮಂಗಳೂರು : ಇಲಿ ಪಾಷಾಣ ತಿಂದು ಮಗು ಸಾವನ್ನಪ್ಪಿರುವ ದಾರುಣ ಘಟನೆ ಉಪ್ಪಿನಂಗಡಿ ಯಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದಿದೆ.
ಯಬಜತ್ತೂರು ಗ್ರಾಮದ ಕೆಮ್ಮಾರದ ನಿವಾಸಿಗಳಾದ ನಿವೃತ್ತ ಸೈನಿಕ ಸೈಜು ಹಾಗೂ ದೀಪ್ತಿ ದಂಪತಿ ಪುತ್ರಿ ಶ್ರೇಯಾ(2.5) ಮೃತಪಟ್ಟ ಮಗು.
ಆಟವಾಡುತ್ತಾ ಮನೆಯಲ್ಲಿದ್ದ ಇಲಿ ಪಾಷಾಣಾವನ್ನು ಮಗು ತಿಂದಿತ್ತು. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ. ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Mangalore