ಕಾಂಗ್ರೆಸ್ ವಿರುದ್ಧ ಫೇಸ್ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂಸ್
ಬೆಂಗಳೂರು : ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ, ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.
ಜೂನ್ 7 ರಂದು ಫೇಸ್ ಬುಕ್ ಪೋಸ್ಟ್ ಒಂದನ್ನು ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, "ಕಾಂಗ್ರೆಸ್ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು" ಎಂದಿದ್ದಾರೆ. ಇದು ಸುಳ್ಳಾರೋಪವಾಗಿದೆ. ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
RELATED TOPICS:
English summary :chakravarti sulibele