ರಾಜ್ಯದಲ್ಲಿ ಇಂದಿನಿಂದ ಬಸ್, ಮೆಟ್ರೋ ಸಂಚಾರ ಆರಂಭ | ಜನತಾ ನ್ಯೂಸ್
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಅನ್ಲಾಕ್ 2.O ಜಾರಿಯಾಗಿದ್ದು, ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಸಂಚಾರ ಆರಂಭವಾಗಿದೆ.
ಚಾಲಕರು ಮತ್ತು ನಿರ್ವಾಹಕರಿಗೆ 2 ಡೋಸ್ ಕೋವಿಡ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದೆ. ಹೆಚ್ಚಿನನವರು ಎರಡನೇ ಡೋಸ್ ಲಸಿಕೆ ಪಡೆದಿಲ್ಲ. ಅಂತವರಿಗೆ ಮೊದಲ ಡೋಸ್ನ ಸರ್ಟಿಫಿಕೇಟ್ ಹಾಗೂ ಆರ್ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯವಾಗಿದೆ.
ಇಂದಿನಿಂದ 1500-2000 ಬಿಎಂಟಿಸಿ ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಬಿಎಂಟಿಸಿಯಲ್ಲಿ ದಿನದ ಪಾಸ್ ನೀಡಲು ಚಿಂತನೆ ನಡೆಸಲಾಗಿದೆ. ಕ್ಯಾಶ್ಲೆಸ್ ಮಾಡುವ ಹಿನ್ನೆಲೆಯಲ್ಲಿ ( ಪೋನ್ ಪೇ, ಗೂಗಲ್ ಪೇ) ಈ ನಿರ್ಧಾರ ಮಾಡಲಾಗಿದೆ.
ಇಂದಿನಿಂದ ಬಿಎಂಟಿಸಿ ಬಸ್ಗಳು ರಸ್ತೆಗಿಳಿದಿವೆ. ಬೆಂಗಳೂರು ನಗರ ಹಾಗೂ ಹೊರ ಭಾಗದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಆದ್ಯತೆ ಹಿನ್ನಲೆ, ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.