ಬೈಕ್ ಕೊಡಿಸದೇ ಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ವೇರ್ ಇಂಜಿನಿಯರ್ | ಜನತಾ ನ್ಯೂಸ್
ಮೈಸೂರು : ಮೈಸೂರಿನ ಕುವೆಂಪುನಗರದ ಮನೆಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ನೇಣಿಗೆ ಶರಣಾಗಿದ್ದಾರೆ. ಅಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕಳೆದೊಂದು ವರ್ಷದಿಂದ ಇವರು ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂ ಪಡೆದು ಮನೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದರು.
ರಾಯಲ್ ಎನ್ಫೀಲ್ಡ್ ಬೈಕ್ ಖರೀದಿಸಬೇಕು ಎಂದು ಇವರು ತಮ್ಮ ತಾಯಿ, ತಂದೆ ಜತೆ ಪ್ರಸ್ತಾಪಿಸಿದ್ದಾರೆ. ಆದರೆ, ಪೋಷಕರು ಸದ್ಯಕ್ಕೆ ಬೇಡ, ಸ್ವಲ್ಪ ದಿನ ಹೋಗಲಿ ಎಂದು ಹೇಳಿದ್ದಾರೆ.
ಇದರಿಂದ ಬೇಸರಗೊಂಡ ಅಜಯ್ ರಾತ್ರಿ ಊಟ ಮುಗಿಸಿ ತಾಯಿ, ತಂದೆ ಹೊರಗೆ ವಾಕಿಂಗ್ ಹೋಗಿದ್ದಾಗ ಮನೆಯಲ್ಲಿ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕುವೆಂಪುನಗರ ಠಾಣೆಯಲ್ಲಿ ದಾಖಲಾಗಿದೆ.