ಜಮ್ಮು ಮತ್ತು ಕಾಶ್ಮೀರ : ಭಯೋತ್ಪಾದಕ ದಾಳಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುತ್ತಿದ್ದ ಸಿಐಡಿ ಇನ್ಸ್ಪೆಕ್ಟರ್ ಹುತಾತ್ಮ | ಜನತಾ ನ್ಯೂಸ್
ಶ್ರೀನಗರ : ನಿನ್ನೆ ಮಂಗಳವಾರ ಅಪರಿಚಿತ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೊರವಲಯದಲ್ಲಿರುವ ಕನಿಪೋರಾದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಐಡಿ ವಿಭಾಗದ ಪೊಲೀಸ್ ಅಧಿಕಾರಿ ಸಾವನ್ನೋಪ್ಪಿದ್ದಾರೆ. ವರದಿಗಳ ಪ್ರಕಾರ, ಹುತಾತ್ಮ ಸಿಐಡಿ ಇನ್ಸ್ಪೆಕ್ಟರ್ ರನ್ನು ಪರ್ವೈಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಅವರನ್ನು ಪರಿಂಪೋರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದರು.
ನೌಗಂ ಪ್ರದೇಶದ ಮಸೀದಿಯಲ್ಲಿ ಸಂಜೆ ಪ್ರಾರ್ಥನೆ ಸಲ್ಲಿಸಿದ ನಂತರ ಪರ್ವೈಜ್ ಅವರು ಮನೆಗೆ ಹಿಂದಿರುಗುತ್ತಿದ್ದಾಗ ಭಯೋತ್ಪಾದಕರು ಹಟಾತ್ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ನಿಧನರಾದ ಬಗ್ಗೆ ವೈದ್ಯರು ಘೋಷಿಸಿದ್ದಾರೆ.
ಕಾಶ್ಮೀರದ ಶ್ರೀನಗರದಲ್ಲಿ ಸಿಐಡಿ ಇನ್ಸ್ಪೆಕ್ಟರ್ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟರು. ಪರ್ವೇಜ್ ಅಹ್ಮದ್ ದಾರ್ ಅವರು ರಾತ್ರಿ 8:30 ಕ್ಕೆ ನೌಗಂ ನ ಕನಿಪೋರಾದಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂದಿರುಗುತ್ತಿದ್ದಾಗ ಭಯೋತ್ಪಾದಕರು ಹಲ್ಲೆ ನಡೆಸಿದರು. ಪಾಕಿಸ್ತಾನದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾದ ಮುಂಚುಣಿಯ ಟಿಆರ್ಎಫ್ನ "ಶಾಹೀದ್ ಅನಸ್ ಸ್ಕ್ವಾಡ್" ಈ ದಾಳಿಯ ಜವಾಬ್ದಾರಿಯನ್ನು ಹೊತ್ತಿಕೊಂಡಿದೆ ಎನ್ನಲಾಗಿದೆ.