ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಮಾಡಿದ ರಾಜ್ಯ ಸರ್ಕಾರ | ಜನತಾ ನ್ಯೂಸ್
ಬೆಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಜುಲೈ ಮೂರನೇ ವಾರದಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಜುಲೈ ತಿಂಗಳಿನಲ್ಲಿ ನಡೆಯುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಶಿಕ್ಷಕರು ಇದರ ಪ್ರಕಾರ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇದೀಗ ಬಿಡುಗಡೆ ಮಾಡಲಾಗಿರುವ ಎಸ್ ಓ ಪಿಯಲ್ಲಿನ ಮಾರ್ಗಸೂಚಿಯನ್ನು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಆದೇಶಿಸಿದೆ.
ಪರೀಕ್ಷೆಯ ಕೆಲಸಗಳಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಜಿಲ್ಲಾಡಳಿತದ ಸಹಾಯದೊಂದಿಗೆ ಕೊರೊನಾ ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಪರೀಕ್ಷೆಯ ಸಂದರ್ಭದಲ್ಲಿ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು ಎಂದು ಸೂಚಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಯ ಮುನ್ನಾ ಮತ್ತು ಪರೀಕ್ಷೆಯಾದ ನಂತರ 1% ಸೋಡಿಯಂ ಹೈಪೊಕ್ಲೋರೈಟ್ಸ್ ಸೆಲ್ಯೂಷನ್ ಸೋಂಕು ನಿವಾರಕ ದ್ರಾವಣವನ್ನು ಸಂಬಂಧಪಟ್ಟ ನಗರ/ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮೂಲಕ ಸಿಂಪಡಿಸಿ ಸ್ವಚ್ಛಗೊಳಿಸುವುದು.
ಪ್ರತಿ ಪರೀಕ್ಷೆಯ ಮುನ್ನಾ ಮತ್ತು ಪರೀಕ್ಷೆಯಾದ ನಂತರ ಪರೀಕ್ಷೆಯಾದ ನಂತರ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳು/ಪೀಠೋಪಕರಣಗಳನ್ನು ಮತ್ತು ಇನ್ನಿತರ ವಸ್ತುಗಳನ್ನು 2.5 % ಲೈಸೂಲ್ ಅಥವಾ ಹ್ಯಾಂಡ್ ಸ್ಯಾನಿಟೈಸರ್ನಿಂದ ಸ್ಯಾನಿಟೈಸ್ ಮಾಡುವುದು.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ, ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಪ್ರದೇಶ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಆರು ಅಡಿ ಅಥವಾ 2 ಮೀಟರ್ ದೈಹಿಕ ಅಂತರವನ್ನು ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು.
ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲ್ಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸುವುದು.
ದೈಹಿಕ ಕನಿಷ್ಠ ಆರು ಅಡಿಗಳ ಅಂತರ ಕಾಪಾಡಿಕೊಳ್ಳುವುದು.
ಪ್ರತಿ ಕೊಠಡಿಯಲ್ಲಿ ಗರಿಷ್ಠ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯಂತೆ, ಒಬ್ಬ ವಿದ್ಯಾರ್ಥಿಯಿಂದ ಮತ್ತೊಬ್ಬ ವಿದ್ಯಾರ್ಥಿಯ ನಡುವೆ 6 ಅಡಿ ಅಂತರವಿರಬೇಕು.
ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಎಸ್ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷೆಯ ಮೊದಲು ಪರಿಶೀಲಿಸುವುದು ಮತ್ತು ಅನುಷ್ಠಾನವನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಬೇಕು.
ಒಂದೊಮ್ಮೆ ವಿದ್ಯಾರ್ಥಿಗಳು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೆ ಅಂಥವರಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವಂತೆ ನಿರ್ದೇಶಿಸುವುದು.
ಪ್ರತಿ ವಿದ್ಯಾರ್ಥಿಯು ತಮ್ಮದೇ ಆದ ನೀರಿನ ಬಾಟಲಿಗಳನ್ನು ತರಲು ಅವಕಾಶ ನೀಡುವುದು.
ಸ್ಯಾನಿಟೈಸರ್ ನ್ನು ಮಂಡಳಿಯಿಂದ ನೀಡಲಾಗುವುದು. ಆರೋಗ್ಯ ತಪಾಸಣಾ ಕೌಂಟರಿನಲ್ಲಿ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡುವುದು.