ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಭೀಕರ ಹತ್ಯೆ | ಜನತಾ ನ್ಯೂಸ್
ಬೆಂಗಳೂರು : ಬೆಂಗಳೂರು ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಾಜಿ ಕಾರ್ಪೇರೇಟರ್ ರೇಖಾ ಕದೀರೇಶ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
ರೇಖಾ ಕದಿರೇಶ್ ಮನೆ ಮುಂದೆಯೇ ಇಂದು ಹಲ್ಲೆ ನಡೆದಿತ್ತು. ಮನೆಯ ಒಳಗಡೆ ಇದ್ದ ರೇಖಾ ಅವರನ್ನು ಹೊರಗೆ ಕರೆದು ಮಾರಕ ಅಸ್ತ್ರಗಳಿಂದ ಹಲ್ಲೆ ನಡೆದಿತ್ತು.
ಗಾಯಾಳು ರೇಖಾ ಕದೀರೇಶ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.
RELATED TOPICS:
English summary :Bangalore