ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಆತಂಕ ಬೇಡ, ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ಕೇಸ್ ದಾಖಲು: ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸಾರ್ವಜನಿಕರು ಹೆಚ್ಚು ಆತಂಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
ನಗರದಲ್ಲಿ ಮಾತಾನಾಡಿದ ಅವರು, ನಿನ್ನೆ ಮೈಸೂರಿನಲ್ಲಿ ಒಂದು ಕೇಸ್ ಮತ್ತೆ ಆಗಿತ್ತು. ಈಗ ಬೆಂಗಳೂರಿನಲ್ಲಿ ಹಿರಿಯ ವ್ಯಕ್ತಿಯೊಬ್ಬರಿಗೆ ಡೆಲ್ಟಾ ಪ್ಲಸ್ ಸೋಂಕು ಕಂಡು ಬಂದಿದೆ. ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದವರನ್ನ ಪರೀಕ್ಷೆ ಮಾಡಲಾಗಿದ್ದು, ಇಂದು ವರದಿ ಬರಲಿದೆ ಎಂದು ತಿಳಿಸಿದರು.
ಡೆಲ್ಟಾ ಪ್ಲಸ್ ವೈರಸ್ ಕುರಿತು ಯಾರು ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ. ಡೆಲ್ಟಾ ಪ್ಲಸ್ ಮತ್ತು ಡೆಲ್ಟಾ ವೈರಸ್ ಒಂದೇ ಗುಣಲಕ್ಷಣ ಹೊಂದಿದೆ. ಆದರೆ ಚಿಕಿತ್ಸೆ ವಿಧಾನ ಸ್ವಲ್ಪ ಬೇರೆ ಇದೆ ಎಂದು ಸ್ಪಷ್ಟಪಡಿಸಿದರು.
ಕೋವಿಡ್ 3ನೆ ಪರಿವರ್ತಿತ ಅಲೆ ಡೆಲ್ಟಾ ಪ್ಲಸ್ ಸೋಂಕು ರೂಪದಲ್ಲಿ ಕಾಣಿಸಿಕೊಳ್ಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಇನ್ನೂ ಅಧ್ಯಯನ ನಡೆಯಬೇಕೆಂದು ಹೇಳಿದರು.
ಅನಗತ್ಯವಾಗಿ ಸಾರ್ವಜನಿಕರು ಈ ವೈರಸ್ ಬಗ್ಗೆ ಹೆಚ್ಚು ಆತಂಕ ಪಡಬೇಕಾದ ಅಗತ್ಯವಿಲ್ಲ. ಈ ಹಿಂದೆ ಒಂದು ಮತ್ತು ಎರಡನೆ ಕೋವಿಡ್ ಅಲೆ ಸಂದರ್ಭದಲ್ಲಿ ಯಾವ ರೀತಿ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗಿತ್ತೋ ಅದೇ ರೀತಿ ಈಗಲೂ ನಿಯಮಗಳನ್ನು ಪಾಲನೆ ಮಾಡಿದರೆ ಅಪಾಯದಿಂದ ಪಾರಾಗಬಹುದು ಎಂದು ಸಲಹೆ ಮಾಡಿದರು. ಕೋವಿಡ್ ಲಸಿಕೆ ಪಡೆದರೆ ಯಾವುದೇ ರೀತಿಯ ಅಪಾಯ ಬರುವುದಿಲ್ಲ. ಲಸಿಕೆ ಪಡೆದ ತಕ್ಷಣ ಇದು ನಮ್ಮನ್ನು ಬಾಧಿಸುವುದೂ ಇಲ್ಲ ಎಂಬ ಬಗ್ಗೆಯೂ ಖಚಿತತೆ ಇಲ್ಲ. ಯಾರು ಲಸಿಕೆ ಪಡೆದಿಲ್ಲವೋ ಅಂತಹವರು ಕೂಡಲೇ ಲಸಿಕೆ ಪಡೆಯಬೇಕು ಎಂದು ಹೇಳಿದರು.