ತಂದೆ ತಾಯಿಯ ಸಾವಿನಿಂದ ಆಘಾತಕೊಳಗಾಗಿದ್ದ ಯುವಕ ಹುಟ್ಟುಹಬ್ಬದಂದೇ ಆತ್ಮಹತ್ಯೆಗೆ ಶರಣು | ಜನತಾ ನ್ಯೂಸ್
ಮೈಸೂರು : ಹುಟ್ಟುಹಬ್ಬದ ದಿನವೇ ಯುವಕನೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆದಿದೆ. ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿ ಎಸ್.ಕಾರ್ತಿಕ್ (30 ) ಮೃತ ದುರ್ದೈವಿ.
ತಂದೆ, ತಾಯಿ ಕಳೆದುಕೊಂಡು ಮನನೊಂದಿದ್ದ ಕಾರ್ತಿಕ್, ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈಗ ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ಮೃತಪಟ್ಟಿದ್ದಾನೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ತಿಕ್, ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿ ಉದ್ಯೋಗ ಮಾಡಿಕೊಂಡಿದ್ದ. ಕಾರ್ತಿಕ್ ಅವರ ತಾಯಿ ಡಾ. ಪಾರ್ವತಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು. ನಂತರ ತಂದೆ ಶಿವಲಿಂಗಯ್ಯ ಮೃತಪಟ್ಟಿದ್ದರು. ತಾಯಿ ಸಾವನ್ನಪ್ಪಿದ ದಿನ ವಿಷ ಸೇವಿಸಿದ್ದ ಕಾರ್ತಿಕ ತಂದೆ ಸಾವಿನ ಬಳಿಕ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.
ಸದ್ಯ ಚಿಕ್ಕಮ್ಮನೊಂದಿಗೆ ವಾಸವಿದ್ದ ಕಾರ್ತಿಕ್, ಇಂದು ಡೆತ್ ನೋಟ್ ಬರೆದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.