ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು, ಬಂಧನ | ಜನತಾ ನ್ಯೂಸ್
ಬೆಂಗಳೂರು : ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಪೀಟರ್ ಮತ್ತು ಸೂರ್ಯ ಬಂಧಿತ ಆರೋಪಿಗಳು. ಪೊಲೀಸರ ಕಾರ್ಯಾಚರಣೆಯ ವೇಳೆ ಹಲ್ಲೆಗೆ ಮುಂದಾದ ಆರೋಪಿಗಳಿಬ್ಬರ ಕಾಲಿಗೆ ಗುಂಡಿಕ್ಕಿ ಬಳಿಕ ಬಂಧಿಸಿದ್ದಾರೆ.
ಅರೆಸ್ಟ್ ಮಾಡುವ ಸಮಯದಲ್ಲಿ ಪೊಲೀಸರ ಮೇಲೆ ಪೀಟರ್ ಮತ್ತು ಸೂರ್ಯ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಗಾಯಗೊಂಡಿದ್ಧಾರೆ.
ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಇಬ್ಬರು ಸುಮನಹಳ್ಳಿಯಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅವರ ಬಂಧನಕ್ಕೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಆರೋಪಿಗಳು ಪಿಎಸ್ಸೈ ಮತ್ತು ಕಾನ್ ಸ್ಟೇಬಲ್ ಮೇಲೆ ಹಲ್ಲೆಗೆ ಮುಂದಾದರೆನ್ನಲಾಗಿದೆ. ಆಗ ಪೊಲೀಸರು ಅವರಿಬ್ಬರ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ಆರೋಪಿಗಳ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.