Thu,Apr25,2024
ಕನ್ನಡ / English

ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕಿಡಿ | ಜನತಾ ನ್ಯೂಸ್

25 Jun 2021
2284

ಬೆಂಗಳೂರು : ದೇಶದಲ್ಲಿ 60 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ ಎಲ್ಲ ಜ್ವಲಂತ ಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನ ಮಾಡಿತೇ ವಿನಾ ಅವುಗಳಿಗೆ ಪರಿಹಾರ ಕಂಡುಕೊಳ್ಳಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ಟೀಕಿಸಿದ್ದಾರೆ.

ಬಳ್ಳಾರಿ ಬಿಜೆಪಿ ಘಟಕ ಶುಕ್ರವಾರ ಹಮ್ಮಿಕೊಂಡಿದ್ದ ಈ-ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮೋದಿ ಸರಕಾರದ 7 ವರ್ಷಗಳ ಸಾಧನೆ ವಿಷಯದ ಬಗ್ಗೆ ವರ್ಚುವಲ್ ಮೂಲಕ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಸಮಸ್ಯೆಗಳನ್ನು ನಿರಂತರವಾಗಿ ಬದುಕಿರುವಂತೆ ನೋಡಿಕೊಳ್ಳುತ್ತಿತ್ತು. ಆದರೆ, ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಅಂಥ ಸಮಸ್ಯೆಗಳಿಗೆ ಚರಮಗೀತೆ ಹಾಡುತ್ತಾ ಬರುತ್ತಿದೆ ಎಂದರು.

ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ. ಒಂದೇ ಭಾರತ-ಒಂದೇ ದೇಶ ಎನ್ನುವುದು ಬಿಜೆಪಿಯ ನೀತಿ. ಈ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರಕ್ಕಿದ್ದ 370ನೇ ವಿಧಿಯನ್ನು ತೆಗೆಯಲಾಯಿತು. ಈಗ ಕಾಶ್ಮೀರವೂ ಭಾರತದ ಅಂತರ್ಭಾಗ. ಕಾಂಗ್ರೆಸ್‍ಗೆ ಇಂಥ ಇಚ್ಛಾಶಕ್ತಿ ಇರಲಿಲ್ಲ ಎಂದು ಅವರು ಕಿಡಿಕಾರಿದರು.

ಕೋವಿಡ್‌ ಸಂಕಷ್ಟ ಭಾರತಕ್ಕೆ ಬಂದಾಗ ಅದನ್ನೇ ಅವಕಾಶ ಮಾಡಿಕೊಂಡ ಮೋದಿ ಅವರು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿ ಕೈಗಾರಿಕೆ, ಉತ್ಪಾದನೆ, ಉದ್ಯೋಗ ಸೃಷ್ಠಿಗೆ ಉತ್ತೇಜನ ನೀಡಿದರು.

ಕೇವಲ ಒಂದು ಪಿಪಿಇ ಕಿಟ್‌, ಮಾತ್ರೆ, ಔಷಧಿ, ಸ್ಯಾನಿಟೈಸರ್‌ ವಿಷಯದಲ್ಲಿ ಪರ ದೇಶಗಳ ಮೇಲೆ ಅವಲಂಭಿತವಾಗುತ್ತಿದ್ದ ಭಾರತವು ಕೇವಲ ಒಂದೂವರೆ ವರ್ಷದಲ್ಲೇ ಸಂಪೂರ್ಣ ಸ್ವಾವಲಂಭನೆ ಸಾಧಿಸಿತು.

ಲಸಿಕೆ ತಯಾರಿಕೆಯಲ್ಲಿ ಜಗತ್ತಿನ ಅಗ್ರಮಾನ್ಯ ದೇಶವಾಗಿ ಹೊರಹೊಮ್ಮಿತು. ಇದು ಭಾರತದ ಸಾಧನೆ ಎಂದು ಡಿಸಿಎಂ ಒತ್ತಿ ಹೇಳಿದರು.

RELATED TOPICS:
English summary :Ashwath Narayan

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...