ಮೂರನೇ ಅಲೆ: ಕರ್ನಾಟಕ ಸೇರಿ 8 ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಎಚ್ಚರಿಕೆ | ಜನತಾ ನ್ಯೂಸ್
ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಗೊಂಡ ತಳಿ ಕ್ಷಿಪ್ರವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜೂನ್ 26) ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಬಗ್ಗೆ ಶೀಘ್ರವೇ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.
ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿರುವ ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪಂಜಾಬ್, ಹರಿಯಾಣ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಜನರು ಒಂದೆಡೆ ಸೇರುವುದನ್ನು ನಿರ್ಬಂಧಿಸಲು ಸೂಚಿಸಿದೆ.
ಕ್ರಮಗಳನ್ನು ತೆಗೆದುಕೊಳ್ಳುವಂತೆ ದಕ್ಷಿಣದ ರಾಜ್ಯಗಳಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ನೀಡಿದ ಮಾಹಿತಿಯಲ್ಲಿ ಕೇಂದ್ರವು, ಜನರು ಗುಂಪುಗೂಡುವುದನ್ನು ತಡೆಯುವುದು, ಹೆಚ್ಚು ಲಸಿಕೆ ನೀಡಿಕೆ, ಪರೀಕ್ಷೆಗಳನ್ನು ಹೆಚ್ಚಿಸುವ ಮೂಲಕ ಕೂಡಲೇ ನಿಯಂತ್ರಣ ಕ್ರಮಕ್ಕೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಕೋವಿಡ್ ಮೂರನೇ ಅಲೆಯ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.2.2 ಮಂದಿ ಸೋಂಕಿಗೀಡಾಗಬಹುದು. ಅಂದರೆ 15.4ಲಕ್ಷ ಮಂದಿಗೆ ಸೋಂಕು ತಗುಲಬಹುದು. 18 ವರ್ಷದೊಳಗಿನ 2.38 ಕೋಟಿ ಮಕ್ಕಳು ಇದ್ದು, ಸುಮಾರು 3.40 ಲಕ್ಷ ಮಕ್ಕಳಲ್ಲಿ ಸೋಂಕು ಪತ್ತೆಯಾಗುವ ಸಾಧ್ಯತೆ ಇದೆ. 8 ವಾರಗಳ ಕಾಲ ಮೂರನೇ ಅಲೆ ಬಾಧಿಸಬಹುದೆಂದು ಅಂದಾಜಿಸಲಾಗಿದೆ.