Thu,Apr18,2024
ಕನ್ನಡ / English

ಭಯೋತ್ಪಾದಕ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳದೇ "ಎಫ್‌ಎಟಿಎಫ್" ಗ್ರೇ ಪಟ್ಟಿಯಲ್ಲಿ ಮುಂದುವರಿದಿದೆ ಪಾಕಿಸ್ತಾನ | ಜನತಾ ನ್ಯೂಸ್

26 Jun 2021
1088

ಪ್ಯಾರಿಸ್ : ಪಾಕಿಸ್ತಾನವನ್ನು ಮತ್ತೊಮ್ಮೆ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‌ಎಟಿಎಫ್)ನಲ್ಲಿ ಗ್ರೇ ಲಿಸ್ಟ್(ಬೂದಿಪಟ್ಟಿ) ಅಥವಾ "ಹೆಚ್ಚಿದ ಮೇಲ್ವಿಚಾರಣೆಯ" ಅಡಿಯಲ್ಲಿರುವ ದೇಶಗಳ ಪಟ್ಟಿಯಲ್ಲಿ ಉಳಿಸಿಕೊಳ್ಳಲಾಗಿದೆ. ಯುಎನ್(ವಿಶ್ವಸಂಸ್ಥೆ) ಸೆಕ್ಯುರಿಟಿ ಕೌನ್ಸಿಲ್-ಗೊತ್ತುಪಡಿಸಿದ ಭಯೋತ್ಪಾದಕ ಗುಂಪುಗಳ ಉನ್ನತ ನಾಯಕತ್ವವನ್ನು ವಿಚಾರಣೆಗೆ ಒಳಪಡಿಸುವಲ್ಲಿ ಕೊರತೆಯಿದೆ, ಎಂದು ಪ್ಯಾರಿಸ್ ಮೂಲದ ಯುಎನ್ ವಾಚ್‌ಡಾಗ್ ತೀರ್ಮಾನಿಸಿದಂತೆ. ಯುಎನ್ ಸೆಕ್ಯುರಿಟಿ ಕೌನ್ಸಿಲ್-ಗೊತ್ತುಪಡಿಸಿದ ಭಯೋತ್ಪಾದಕ ಗುಂಪುಗಳಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಇ ತೋಯಿಬಾ, ಜೈಶ್-ಎ ಮೊಹಮ್ಮದ್, ಅಲ್ ಖೈದಾ ಮತ್ತು ತಾಲಿಬಾನ್ ಸೇರಿವೆ.

ಜೂನ್ 21 ರಿಂದ 25 ರವರೆಗೆ ನಡೆದ ತನ್ನ ಇತ್ತೀಚಿನ ಸಮಗ್ರ ಅಧಿವೇಶನದ ಕೊನೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಎಫ್‌ಎಟಿಎಫ್, ಪಾಕ್ ಗೆ ನೀಡಲಾದ 27 ಕಾರ್ಯಗಳ ಪೈಕಿ 26 ಕಾರ್ಯಗಳನ್ನು ಪೂರ್ಣಗೊಳಿಸಿದರೂ ಸಹ, ಭಯೋತ್ಪಾದಕರು ಮತ್ತು ಭಯೋತ್ಪಾದಕ ಘಟಕಗಳನ್ನು ಶಿಕ್ಷಿಸುವ ಕೊನೆಯ ಕಾರ್ಯವನ್ನು ಪೂರ್ಣಗೊಳಿಸಲು ಪಾಕಿಸ್ತಾನ ವಿಫಲವಾಗಿದೆ, ಎಂದರೆ ಅದನ್ನು ಸದ್ಯಕ್ಕೆ ಪಟ್ಟಿಯಿಂದ ಹೊರಹಾಕಲಾಗುವುದಿಲ್ಲ, ಎಂದಿದೆ.

ಪಾಕಿಸ್ತಾನವು ತನ್ನ ಕಾರ್ಯತಂತ್ರದ-ಪ್ರಮುಖ ನ್ಯೂನತೆಗಳನ್ನು ನಿವಾರಿಸುವ ಕೆಲಸವನ್ನು ಮುಂದುವರಿಸಬೇಕು ಎಂದು ಎಫ್‌ಎಟಿಎಫ್ ಹೇಳಿದೆ. ಇದಲ್ಲದೆ, ಎಫ್‌ಎಟಿಎಫ್ ಮತ್ತೊಂದು ಹೆಚ್ಚುವರಿ 6-ಅಂಶಗಳ ಪಟ್ಟಿಯನ್ನು ಹಸ್ತಾಂತರಿಸಿದ್ದು, ಈ ಹೊಸ ಪಟ್ಟಿಯಲ್ಲಿ ಮುಖ್ಯವಾಗಿ ಮನಿ ಲಾಂಡರಿಂಗ್ ಮೇಲೆ ಕ್ರಮಗಳೂ ಸೇರಿದೆ.

"ಭಯೋತ್ಪಾದಕ ಹಣಕಾಸು ತನಿಖೆ ನಡೆಸುವ ಮೂಲಕ ಭಯೋತ್ಪಾದನೆಯ ಕೌಂಟರ್ ಫೈನಾನ್ಸ್ (ಸಿಎಫ್‌ಟಿ) ಸಂಬಂಧಿತ ವಿಷಯ ಹಾಗೂ ಯುಎನ್ ಗೊತ್ತುಪಡಿಸಿದ ಭಯೋತ್ಪಾದಕ ಗುಂಪುಗಳ ಹಿರಿಯ ನಾಯಕರು ಮತ್ತು ಕಮಾಂಡರ್‌ಗಳನ್ನು ಗುರಿಯಾಗಿರಿಸಿ ಕಾನೂನು ಕ್ರಮಗಳನ್ನು ಅದನ್ನು ಪ್ರದರ್ಶಿಸುವ ಮೂಲಕ ಬಾಕಿ ಉಳಿದಿರುವ ವಿಷಯಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲು ಪ್ರಗತಿಯನ್ನು ಮುಂದುವರಿಸಲು ಪಾಕಿಸ್ತಾನವನ್ನು ಎಫ್‌ಎಟಿಎಫ್ ಪ್ರೋತ್ಸಾಹಿಸುತ್ತದೆ”, ಎಂದು ಎಫ್‌ಎಟಿಎಫ್ ಅಧ್ಯಕ್ಷ ಮಾರ್ಕಸ್ ಪ್ಲಿಯರ್ ಹೇಳಿದ್ದಾರೆ.

RELATED TOPICS:
English summary :Pakistan to continue in FATF Gray List for not taking action against terror leaders

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...