Fri,Apr26,2024
ಕನ್ನಡ / English

ರೇಖಾ ಹಂತಕ ಪೀಟರ್ ಬಾಯ್ಬಿಟ್ಟ ಸ್ಫೋಟಕ ರಹಸ್ಯ: ಸ್ವಂತ ಅತ್ತಿಗೆಯನ್ನೇ ಕೊಂದ ಮಾಲ? | ಜನತಾ ನ್ಯೂಸ್

28 Jun 2021
1606

ಬೆಂಗಳೂರು : ರಾಜಕೀಯ ಹಿಡಿತ ಸಾಧಿಸಲು ರೇಖಾ ಕೊಲೆ ಮಾಡಿಸಿರೋದನ್ನ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಬಡ ಜನರಿಗೆ ಊಟ ವಿತರಿಸುತ್ತಿರುವಾಗಲೇ ಜೂ.24ರಂದು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ನನ್ನು ಅವರ ಕಚೇರಿ ಬಳಿಯೇ ಅಟ್ಟಾಡಿಸಿ ಕೊಂದ ಪೀಟರ್ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

2018ರಲ್ಲಿ ಕದಿರೇಶ್ ಹತ್ಯೆ ಮಾಡಿದ್ದ ಶೋಭನ್ ಗ್ಯಾಂಗ್​ಗೆ ರೇಖಾ ನೆರವು ನೀಡಿದ್ದಳು. ಇದೇ ವಿಚಾರಕ್ಕೆ ಆಕೆಯನ್ನು ಹತ್ಯೆ ಮಾಡಿದ್ದಾಗಿ ಪ್ರಮುಖ ಆರೋಪಿ ಪೀಟರ್ ವಿಚಾರಣೆಯಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಕದಿರೇಶ್ ಜತೆ ಓಡಾಡಿಕೊಂಡಿದ್ದ ಪೀಟರ್​ಗೆ ಯಾವುದಕ್ಕೂ ಕೊರತೆ ಇರಲಿಲ್ಲ. ಕದಿರೇಶ್ ಹತ್ಯೆಯಾದ ಬೆನ್ನಲ್ಲೇ ರೇಖಾ ಯಾವುದೇ ನೆರವನ್ನು ನೀಡದೆ ಪೀಟರ್​ನನ್ನು ದೂರ ಇಟ್ಟಿದ್ದಳು. ಜೀವನ ನಿರ್ವಹಣೆಗೂ ಕಷ್ಟವಾದಾಗ ರೇಖಾ ಮೇಲೆ ಆಕ್ರೋಶಗೊಂಡಿದ್ದ. ಅದನ್ನು ತಿಳಿದಿದ್ದ ಕದಿರೇಶ್ ಅಕ್ಕ ಮಾಲಾ ಹಾಗೂ ಇತರರು ಪೀಟರ್​ನನ್ನು ದಾಳವಾಗಿ ಬಳಸಿಕೊಂಡು ತಮ್ಮ ದಾರಿಗೆ ಅಡ್ಡವಾಗಿದ್ದ ರೇಖಾಳನ್ನು ಮುಗಿಸಲು ಆತನಿಗೆ ಆಮಿಷವೊಡ್ಡುತ್ತಿದ್ದರು.

ಜೊತೆಗೆ ಆಡಳಿತ ಹಾಗೂ ಉಳಿದ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿದ್ದ ಕದಿರೇಶ್, ಅಕ್ಕ, ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದರು. ಕದಿರೇಶ್ ಕೊಲೆಯಾದ ನಂತರ ರೇಖಾ, ಪತಿ ಮನೆಯವರನ್ನು ದೂರವಿಟ್ಟಿದ್ದರು. ಕದಿರೇಶ್ ಆಸ್ತಿಯನ್ನು ರೇಖಾ ಮಾತ್ರ ಅನುಭವಿಸುತ್ತಿದ್ದಾರೆಂಬ ಕಾರಣಕ್ಕೆ ಮಾಲಾ ಗಲಾಟೆ ಮಾಡುತ್ತಿದ್ದಳು. ಇತ್ತೀಚೆಗೆ ಮಾಲಾ ಸಂಬಂಧಿಯೊಬ್ಬರ ಕಪಾಳಕ್ಕೆ ರೇಖಾ ಹೊಡೆದಿದ್ದರು. ಇದು ವೈಷಮ್ಯಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಮುಂಬರುವ ಬಿಬಿಎಂಪಿ ಚುನಾವಣೆಗೆ ನಿಲ್ಲಲು ರೇಖಾ ಕದಿರೇಶ್ ಸಿದ್ಧವಾಗಿದ್ದರು. ಈ ಬಾರಿಯೂ ಬಿಜೆಪಿಯಿಂದಲೇ ರೇಖಾಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿತ್ತು. ಇತ್ತ ಮಾಲಾ ಬಿಎಸ್​ಪಿಯಿಂದ ಚುನಾವಣೆ ಸ್ಪರ್ಧಿಸಲು ಚಿಂತಿಸಿದ್ದಳು. ತನಗೆ ಆಗದಿದ್ದರೆ ಮಗಳು ಕಸ್ತೂರಿ ಅಥವಾ ಅರುಳ್ ಪತ್ನಿ ಪೂರ್ಣಿಮಾಳನ್ನು ನಿಲ್ಲಿಸಲು ತಯಾರಿ ಮಾಡಿದ್ದಳು.

ಆದರೆ ಏರಿಯಾದಲ್ಲಿ ಹೆಚ್ಚು ಸಮಾಜ ಸೇವೆಯಲ್ಲಿ ತೊಡಗಿದ್ದ ರೇಖಾ ಮೀರಿ ಚುನಾವಣೆಗೆ ನಿಲ್ಲೋದು ಕಷ್ಟದ ಮಾತಾಗಿತ್ತು. ಹಾಗಾಗಿ ರೇಖಾ ಜೊತೆಗೇ ಇದ್ದ ಪೀಟರ್ ಬಳಸಿ ರೇಖಾ ಕಥೆಯನ್ನೇ ಮುಗಿಸೋ ಪ್ಲ್ಯಾನ್ ಮಾಡಿಕೊಂಡಿದ್ರು.

ಪ್ರಮುಖ ಆರೋಪಿ ಪೀಟರ್ ಹಾಗೂ ಸೂರ್ಯನ ಜತೆ ಸೇರಿ ರೇಖಾ ಕೊಲೆಗೆ ಒಳಸಂಚು ರೂಪಿಸಿದ್ದರು. ಹತ್ಯೆಯಲ್ಲಿ ಮಾಲಾ ಹಾಗೂ ಈಕೆಯ ಪುತ್ರ ಅರುಳ್ ಭಾಗಿಯಾಗಿರುವುದು ತನಿಖೆಯಲಿ ದೃಢಪಟ್ಟಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ರೇಖಾ ಹತ್ಯೆಗೆ ಕೇವಲ ರಾಜಕೀಯ ಕಾರಣನಾ? ಅಥವಾ ಬೇರೇನಾದ್ರೂ ಕಾರಣಗಳಿವೆಯಾ ಅಂತಾ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

RELATED TOPICS:
English summary :Rekha Kadiresh

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...