ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಮುಳುಗಿ ಸಾವು! | ಜನತಾ ನ್ಯೂಸ್
ಬೆಳಗಾವಿ : ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ನದಿಯಲ್ಲಿ ಸಂಭವಿಸಿದೆ.
ಮೃತ ದುರ್ದೈವಿಗಳನ್ನ ಪರಶುರಾಮ ಗೋಪಾಲ ಬನಸೋಡೆ (24), ಧರೇಪ್ಪ ಗೋಪಾಲ ಬನಸೋಡೆ (29), ಸದಾಶಿವ ಬನಸೋಡೆ (22) ಹಾಗೂ ಶಂಕರ ಗೋಪಾಲ ಬನಸೋಡೆ (20) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಸಹೋದರರಾಗಿದ್ದು, ನಾಲ್ವರೂ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ನೀರಲ್ಲಿ ಕಾಲು ಜಾರಿದ ಒಬ್ಬರನ್ನು ರಕ್ಷಣೆ ಮಾಡಲು ಹೋಗಿ ಉಳಿದ ಸಹೋದರರೂ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಕೊಚ್ಚಿಹೋದವರನ್ನ ಪತ್ತೆ ಮಾಡುವ ಕಾರ್ಯವನ್ನು ಸ್ಥಳೀಯರು ಸೇರಿದಂತೆ ರಕ್ಷಣಾ ಸಿಬ್ಬಂದಿ ಮಾಡುತ್ತಿದ್ದು, ಒಂದೇ ದಿನ ನಾಲ್ವರು ಸಹೋದರರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಎನ್ಡಿಆರ್ಎಫ್ ತಂಡ ಮತ್ತು ಮೀನುಗಾರರು ಶವ ಹುಡುಕಾಟಕ್ಕೆ ಮುಂದಾಗಿದ್ದಾರೆ.